ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು.

ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ ಫೌಂಡೇಶನ್ ಅಧ್ಯಕ್ಷ ಹರೀಶ್ ರೆಡ್ಡಿ ನೇತೃತ್ವದಲ್ಲಿ ಹಲವಾರು ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳ ಹೋರಾಟಗಾರರು ಪಾದಯಾತ್ರೆಗೆ ಸಾಥ್ ನೀಡಿದ್ದರು.

ಬೆಂಗಳೂರಿನ ಕೊಳಚೆ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡದೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿರೋದನ್ನ ವಿರೋಧಿಸಿ ಪಾದಯಾತ್ರೆ ನಡೆಸಲಾಯಿತು. ಚಿಕ್ಕಬಳ್ಳಾಪುರ ನಗರದ ಶನಿಮಹಾತ್ಮ ದೇವಾಲಯದಿಂದ ನೂರಾರು ಜನ ಹೋರಾಟಗಾರರೊಂದಿಗೆ ಬಿ.ಬಿ. ರಸ್ತೆಯಲ್ಲಿ ಪಾದಯಾತ್ರೆ ನಡೆಸಲಾಯಿತು.

ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಶುದ್ಧ ಕುಡಿಯುವ ನೀರು ಕೊಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲಿನ ಶಾಸಕರು ಹೊರ ಜಿಲ್ಲೆಗಳಲ್ಲಿ ಹೋಗಿ ತೊಡೆ ತಟ್ಟುತ್ತಾರೆ ಅದೇ ಪೌರುಷವನ್ನು ನಮ್ಮ ಜಿಲ್ಲೆಯ ಕೆಲಸಗಳ ಮೇಲೆ ನೋಡಿಸಿದರೆ ನಮ್ಮ ಜಿಲ್ಲೆ ನಮ್ಮ ಜಿಲ್ಲೆಯ ಜನ ನೆಮ್ಮದಿಯಾಗಿರುತ್ತಾರೆ. ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಪಾದಯಾತ್ರೆಯ ಉದ್ದಗಲಕ್ಕೂ ಮಹಿಳೆಯರು ಬಿಂದಿಗೆಗಳನ್ನು ತಲೆಯ ಮೇಲೆ ಹೊತ್ತು ಸಾಗುತ್ತಿರುವ ಎಲ್ಲರ ಕಣ್ಮನ ಸೆಳೆಯುತ್ತಿತ್ತು. ಇನ್ನು ಪಾದಯಾತ್ರೆಯ ಬಳಿಕ ಎಸಿ ಅಶ್ವಿನ್ ಗೆ ಹೋರಾಟಗಾರರು ಮನವಿ ಸಲ್ಲಿಸಿದರು.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

15 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

18 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago