ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು.

ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ ಫೌಂಡೇಶನ್ ಅಧ್ಯಕ್ಷ ಹರೀಶ್ ರೆಡ್ಡಿ ನೇತೃತ್ವದಲ್ಲಿ ಹಲವಾರು ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳ ಹೋರಾಟಗಾರರು ಪಾದಯಾತ್ರೆಗೆ ಸಾಥ್ ನೀಡಿದ್ದರು.

ಬೆಂಗಳೂರಿನ ಕೊಳಚೆ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡದೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿರೋದನ್ನ ವಿರೋಧಿಸಿ ಪಾದಯಾತ್ರೆ ನಡೆಸಲಾಯಿತು. ಚಿಕ್ಕಬಳ್ಳಾಪುರ ನಗರದ ಶನಿಮಹಾತ್ಮ ದೇವಾಲಯದಿಂದ ನೂರಾರು ಜನ ಹೋರಾಟಗಾರರೊಂದಿಗೆ ಬಿ.ಬಿ. ರಸ್ತೆಯಲ್ಲಿ ಪಾದಯಾತ್ರೆ ನಡೆಸಲಾಯಿತು.

ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಶುದ್ಧ ಕುಡಿಯುವ ನೀರು ಕೊಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲಿನ ಶಾಸಕರು ಹೊರ ಜಿಲ್ಲೆಗಳಲ್ಲಿ ಹೋಗಿ ತೊಡೆ ತಟ್ಟುತ್ತಾರೆ ಅದೇ ಪೌರುಷವನ್ನು ನಮ್ಮ ಜಿಲ್ಲೆಯ ಕೆಲಸಗಳ ಮೇಲೆ ನೋಡಿಸಿದರೆ ನಮ್ಮ ಜಿಲ್ಲೆ ನಮ್ಮ ಜಿಲ್ಲೆಯ ಜನ ನೆಮ್ಮದಿಯಾಗಿರುತ್ತಾರೆ. ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಪಾದಯಾತ್ರೆಯ ಉದ್ದಗಲಕ್ಕೂ ಮಹಿಳೆಯರು ಬಿಂದಿಗೆಗಳನ್ನು ತಲೆಯ ಮೇಲೆ ಹೊತ್ತು ಸಾಗುತ್ತಿರುವ ಎಲ್ಲರ ಕಣ್ಮನ ಸೆಳೆಯುತ್ತಿತ್ತು. ಇನ್ನು ಪಾದಯಾತ್ರೆಯ ಬಳಿಕ ಎಸಿ ಅಶ್ವಿನ್ ಗೆ ಹೋರಾಟಗಾರರು ಮನವಿ ಸಲ್ಲಿಸಿದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

4 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

4 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

10 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago