ಶುದ್ಧ ಕುಡಿಯುವ ನೀರಿಗಾಗಿ ಪರದಾಟ:‌ ನೀರಿಗಾಗಿ ಪ್ರಾಣವನ್ನ ಲೆಕ್ಕಿಸದೇ ಬಹುತೇಕ ಬತ್ತಿಹೋಗಿರುವ ಬಾವಿಗಿಳಿದ ದಿಟ್ಟ ಮಹಿಳೆ

ಮುಂಬೈ: ಶುದ್ಧ ಕುಡಿಯುವ ನೀರಿಗಾಗಿ ಮಹಿಳೆಯೊಬ್ಬರು ಬಹುತೇಕ ಬತ್ತಿಹೋಗಿರುವ ನೂರಾರು ಅಡಿಗಳ ಆಳವಾದ ಬಾವಿಗೆ ಇಳಿದು ತಮ್ಮ ಪ್ರಾಣವನ್ನು ಸಹ ಲೆಕ್ಕಿಸದೇ ನೀರು ತರುತ್ತಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ತ್ರಯಂಬಕೇಶ್ವರ ಬಳಿಯ ಮೆಟ್‌‌ರ್ ಹಳ್ಳಿಯಲ್ಲಿ ನಡೆದಿದೆ.‌ ಸದ್ಯ ಈ ವೀಡಿಯೋ ಫುಲ್ ವೈರಲ್ ಆಗುತ್ತಿದೆ.

ಬಾವಿಯಲ್ಲಿ ಅಳವಡಿಸಿರುವ ಚಿಕ್ಕ ಚಿಕ್ಕ ಕಲ್ಲುಗಳ ಸಹಾಯದಿಂದ ಆಳವಾಗಿರುವ ಬಾವಿಗೆ ಇಳಿದ ಮಹಿಳೆ ಒಂದು ಬಿಳಿಯ ಬಣ್ಣದ ಬಕೆಟ್‌ಗೆ ಹಗ್ಗ ಕಟ್ಟಿ ಜೋತು ಬಿಟ್ಟಿದ್ದು ನೀರಿಗಾಗಿ ಬವಣೆ ಪಡುತ್ತಿದ್ದಾರೆ.

ಸಾಮಾನ್ಯವಾಗಿ ಬೇಸಿಗೆಯಲ್ಲಿ, ಭಾರತದ ಅನೇಕ ಭಾಗಗಳು ಬರ ಮತ್ತು ಶಾಖದ ಪರಿಸ್ಥಿತಿಗಳಲ್ಲಿ ತತ್ತರಿಸಿದಾಗ, ಗ್ರಾಮೀಣ ಪ್ರದೇಶಗಳಲ್ಲಿನ ಅನೇಕ ಮಹಿಳೆಯರು ತಮ್ಮ ಕುಟುಂಬಗಳಿಗೆ ನೀರು ತರಲು ತಮ್ಮ ಜೀವವನ್ನು ಪಣಕ್ಕಿಡಬೇಕಾಗುತ್ತದೆ.

ಸದ್ಯ ದೇಶದಲ್ಲಿ ಬೇಸಿಗೆಯ ಸಂದರ್ಭದಲ್ಲಿ ಜನರು ನೀರಿಗಾಗಿ ಯಾವ ರೀತಿ ಬವಣೆ ಪಡುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ನೈಜ ನಿದರ್ಶನ ಆಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

17 minutes ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

3 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

4 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

17 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

23 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

24 hours ago