ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಕಂಡು ಗ್ರಾಮಸ್ಥರು ಕಿಡಿಕಾರಿದ್ದಾರೆ.
MS ರಾಂಚ್ ಪಾಲಿಮರ್ಸ್ ಸಂಸ್ಥೆಯು ಗುತ್ತಿಗೆ ಪಡೆದು ಈ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿದ್ದು, ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ ಸುಸ್ಥಿತಿಯಲ್ಲಿಡದೆ ಸರ್ಕಾರದ ಹಣ ಪಡೆದು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಯಂತ್ರಗಳನ್ನು ಬದಲಾಯಿಸಿ ಕೊಡುವಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಡೇಂಘಿ ಹೆಚ್ಚುತ್ತಿದ್ದರೂ ಗುತ್ತಿಗೆ ಕಂಪನಿ ನಿರ್ಲಕ್ಷ್ಯ ತೋರಿದೆ. ಸ್ವಚ್ಚತೆ ಇಲ್ಲದೆ ಶುದ್ಧ ಕುಡಿಯುವ ನೀರಿನ ಘಟಕ ಮೂಲೆ ಸೇರುವಂತ ಪರಿಸ್ಥಿತಿ ಬಂದಿದೆ. ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರವೇ ಹಾಳಾಗಿರುವ ಯಂತ್ರಗಳನ್ನು ಬದಲಿಸಿ ಶುದ್ಧ ನೀರನ್ನು ಪೂರೈಸಿಕೊಡುವಂತೆ ಗುತ್ತಿಗೆ ಪಡೆದಿರುವ M/S ರಾಂಚ್ ಪಾಲಿಮರ್ಸ್ ಸಂಸ್ಥೆಗೆ ಸೂಚಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…