ಶುಭ್ ಮನ್ ಗಿಲ್ ಚೊಚ್ಚಲ ದ್ವಿಶತಕ! ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು

ಹೈದರಾಬಾದ್: ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಯುವ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಚೊಚ್ಚಲ ದ್ವಿಶತಕ ಸಿಡಿಸುವ ಮೂಲಕ ಎದುರಾಳಿಗಳಿಗೆ ವಿಶ್ವಕಪ್ ಗೆ ನಾನು ತಯಾರಾಗಿದ್ದೇನೆ ಎಂಬ ಸೂಚನೆ ನೀಡಿದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನಾಯಕ ರೋಹಿತ್ ಶರ್ಮಾ ಮೊದಲ ವಿಕೆಟ್ ನಷ್ಟಕ್ಕೆ 60 ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ರೋಹಿತ್ ಶರ್ಮಾ 34 ರನ್ (38) ಎಸೆತಗಳಲ್ಲಿ ಗಳಿಸಿ ಬೌಲರ್ ಟಿಕ್ಕರ್ ಗೆ ವಿಕೆಟ್ ಒಪ್ಪಿಸಿದರು, ಶ್ರೀಲಂಕಾ ವಿರುದ್ಧ ಮಿಂಚಿದ್ದ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಹಾಗೂ ಈ ಪಂದ್ಯದಲ್ಲಿ ಅವಕಾಶ ಪಡೆದಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಬೇಗನೇ ಔಟಾದರು.

ಆರಂಭಿಕ ಆಟಗಾರನಾಗಿ ಕಳೆದ ಸರಣಿಯಲ್ಲಿ ಮಿಂಚಿದ್ದ ಶುಭ್ಮಮನ್ ಗಿಲ್ ಹೈದರಾಬಾದ್ ಅಂಗಳದಲ್ಲಿ ಎದುರಾಳಿ ಬೌಲರ್‌ಗಳನ್ನು ಇನ್ನಿಲ್ಲದಂತೆ ಕಾಡಿದರು, 149 ಎಸೆತಗಳಲ್ಲಿ 19 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸುವ ಮೂಲಕ 208 ರನ್ ಗಳಿಸಿ ವೈಯಕ್ತಿಕ ದಾಖಲೆ ಉತ್ತಮ ಪಡಿಸಿಕೊಳ್ಳುವ ಜೊತೆಗೆ ನ್ಯೂಜಿಲೆಂಡ್ ವಿರುದ್ಧ ಅತ್ಯದಿಕ ರನ್ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ (186) ದಾಖಲೆ ಸರಿಗಟ್ಟಿದರು.

ಸೂರ್ಯಕುಮಾರ್ ಯಾದವ್ (31) ಹಾಗೂ ಉಪನಾಯಕ ಹಾರ್ದಿಕ್ ಪಾಂಡ್ಯ (28) ರನ್ ಗಳಿಸಿ ಔಟಾದರು, ಕೊನೆಯವರೆಗೂ ರನ್ ಗಳಿಸಿದ ಶುಭಮನ್ ಗಿಲ್ ತಂಡದ ಮೊತ್ತವನ್ನು 340 ರ ಗಡಿ ದಾಟಿಸಿ ವಿಕೆಟ್ ಒಪ್ಪಿಸಿದರು, ನ್ಯೂಜಿಲೆಂಡ್ ಪರವಾಗಿ ಶಿಪ್ಲೆ ಹಾಗೂ ಮಿಚೆಲ್ ತಲಾ 2 ವಿಕೆಟ್ ಪಡೆದರೆ ಫರ್ಗುಸನ್, ಸ್ಯಾಂಟ್ನರ್ ಹಾಗೂ ಟಿಕ್ಕರ್ ತಲಾ ಒಂದು ವಿಕೆಟ್ ಪಡೆದುಕೊಂಡರು.

350 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ನ್ಯೂಜಿಲೆಂಡ್ ತಂಡಕ್ಕೆ ಬೌಲರ್ ಸಿರಾಜ್ ಪ್ರಾರಂಭದಲ್ಲಿಯೇ ಆಘಾತ ನೀಡುವ ಮೂಲಕ ಉತ್ತಮ ಫಾರ್ಮ್ ನಲ್ಲಿರುವ ಡೆವಿಡ್ ಕಾನ್ವೆ ಅವರ ವಿಕೆಟ್ ಪಡೆದರು, ಮತ್ತೊಬ್ಬ ಆರಂಭಿಕ ಬ್ಯಾಟ್ಸ್‌ಮನ್ ಫಿನ್ ಅಲೆನ್ (40) ರನ್ ಗಳಿಸಿ ಭರವಸೆ ಮೂಡಿಸಿದ್ದರು ಆದರೆ ಶಾದು೯ಲ್ ಠಾಕೂರ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ನಂತರ ಬಂದ ನಿಕೊಲಾಸ್ ಹಾಗೂ ಮಿಚೆಲ್ ಅವರನ್ನು ಕುಲದೀಪ್ ಯಾದವ್ ಖೆಡ್ಡಾಕ್ಕೆ ಕೆಡವಿದರು, ಏಳನೇ ವಿಕೆಟ್ ಗೆ ಕ್ರೀಸ್ ಗೆ ಆಗಮಿಸಿದ ಮಿಚೆಲ್ ಬ್ರೆಸ್ವೆಲ್ 12 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ ಕೇವಲ 78 ಬಾಲ್ ಗೆ (140) ರನ್‌ಗಳ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಒಂದು ಹಂತದಲ್ಲಿ ವಿಕೆಟ್ ಕಳೆದುಕೊಂಡರೂ ಸಹ ವಿಚಲಿತನಾಗದೇ ಏಕಾಂಗಿಯಾಗಿ ಹೋರಾಟ ನಡೆಸಿದ ಬ್ರೆಸ್ವೆಲ್ ಎಲ್ಲರ ಮೆಚ್ಚುಗೆಗೆ ಪಾತ್ರರಾದರು, ಕೊನೆಯ 5 ಎಸೆತಗಳಲ್ಲಿ 13 ರನ್ ಬೇಕಿದ್ದಾಗ ಲಾರ್ಡ್ ಶಾದು೯ಲ್ ಠಾಕೂರ್ ಬೀಸಿದ ಎಲ್ ಬಿಗೆ ಬಲಿಯಾದರು.

337 ರನ್ ಗಳಿಸಿ ಆಲೌಟ್ ಆದ ಬ್ಲಾಕ್ ಕ್ಯಾಪ್ ಖ್ಯಾತಿಯ ನ್ಯೂಜಿಲೆಂಡ್ ಉತ್ತಮ ಹೋರಾಟ ನೀಡಿ ಕೊನೆಯಲ್ಲಿ ಪಂದ್ಯ ಕೈ ಚೆಲ್ಲಿತು, ಭಾರತದ ಪರವಾಗಿ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ ಕಬಳಿಸಿದರೆ, ಶಾದು೯ಲ್ ಠಾಕೂರ್ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು, ಅನುಭವಿ ಬೌಲರ್ ಶಮಿ ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ದುಬಾರಿಯಾದರು. ದ್ವಿಶತಕ ದಾಖಲಿಸಿದ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 hour ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

18 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

18 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

21 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago