ಶುಭ್ ಮನ್ ಗಿಲ್ ಚೊಚ್ಚಲ ದ್ವಿಶತಕ! ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು

ಹೈದರಾಬಾದ್: ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಯುವ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಚೊಚ್ಚಲ ದ್ವಿಶತಕ ಸಿಡಿಸುವ ಮೂಲಕ ಎದುರಾಳಿಗಳಿಗೆ ವಿಶ್ವಕಪ್ ಗೆ ನಾನು ತಯಾರಾಗಿದ್ದೇನೆ ಎಂಬ ಸೂಚನೆ ನೀಡಿದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನಾಯಕ ರೋಹಿತ್ ಶರ್ಮಾ ಮೊದಲ ವಿಕೆಟ್ ನಷ್ಟಕ್ಕೆ 60 ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ರೋಹಿತ್ ಶರ್ಮಾ 34 ರನ್ (38) ಎಸೆತಗಳಲ್ಲಿ ಗಳಿಸಿ ಬೌಲರ್ ಟಿಕ್ಕರ್ ಗೆ ವಿಕೆಟ್ ಒಪ್ಪಿಸಿದರು, ಶ್ರೀಲಂಕಾ ವಿರುದ್ಧ ಮಿಂಚಿದ್ದ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಹಾಗೂ ಈ ಪಂದ್ಯದಲ್ಲಿ ಅವಕಾಶ ಪಡೆದಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಬೇಗನೇ ಔಟಾದರು.

ಆರಂಭಿಕ ಆಟಗಾರನಾಗಿ ಕಳೆದ ಸರಣಿಯಲ್ಲಿ ಮಿಂಚಿದ್ದ ಶುಭ್ಮಮನ್ ಗಿಲ್ ಹೈದರಾಬಾದ್ ಅಂಗಳದಲ್ಲಿ ಎದುರಾಳಿ ಬೌಲರ್‌ಗಳನ್ನು ಇನ್ನಿಲ್ಲದಂತೆ ಕಾಡಿದರು, 149 ಎಸೆತಗಳಲ್ಲಿ 19 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸುವ ಮೂಲಕ 208 ರನ್ ಗಳಿಸಿ ವೈಯಕ್ತಿಕ ದಾಖಲೆ ಉತ್ತಮ ಪಡಿಸಿಕೊಳ್ಳುವ ಜೊತೆಗೆ ನ್ಯೂಜಿಲೆಂಡ್ ವಿರುದ್ಧ ಅತ್ಯದಿಕ ರನ್ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ (186) ದಾಖಲೆ ಸರಿಗಟ್ಟಿದರು.

ಸೂರ್ಯಕುಮಾರ್ ಯಾದವ್ (31) ಹಾಗೂ ಉಪನಾಯಕ ಹಾರ್ದಿಕ್ ಪಾಂಡ್ಯ (28) ರನ್ ಗಳಿಸಿ ಔಟಾದರು, ಕೊನೆಯವರೆಗೂ ರನ್ ಗಳಿಸಿದ ಶುಭಮನ್ ಗಿಲ್ ತಂಡದ ಮೊತ್ತವನ್ನು 340 ರ ಗಡಿ ದಾಟಿಸಿ ವಿಕೆಟ್ ಒಪ್ಪಿಸಿದರು, ನ್ಯೂಜಿಲೆಂಡ್ ಪರವಾಗಿ ಶಿಪ್ಲೆ ಹಾಗೂ ಮಿಚೆಲ್ ತಲಾ 2 ವಿಕೆಟ್ ಪಡೆದರೆ ಫರ್ಗುಸನ್, ಸ್ಯಾಂಟ್ನರ್ ಹಾಗೂ ಟಿಕ್ಕರ್ ತಲಾ ಒಂದು ವಿಕೆಟ್ ಪಡೆದುಕೊಂಡರು.

350 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ನ್ಯೂಜಿಲೆಂಡ್ ತಂಡಕ್ಕೆ ಬೌಲರ್ ಸಿರಾಜ್ ಪ್ರಾರಂಭದಲ್ಲಿಯೇ ಆಘಾತ ನೀಡುವ ಮೂಲಕ ಉತ್ತಮ ಫಾರ್ಮ್ ನಲ್ಲಿರುವ ಡೆವಿಡ್ ಕಾನ್ವೆ ಅವರ ವಿಕೆಟ್ ಪಡೆದರು, ಮತ್ತೊಬ್ಬ ಆರಂಭಿಕ ಬ್ಯಾಟ್ಸ್‌ಮನ್ ಫಿನ್ ಅಲೆನ್ (40) ರನ್ ಗಳಿಸಿ ಭರವಸೆ ಮೂಡಿಸಿದ್ದರು ಆದರೆ ಶಾದು೯ಲ್ ಠಾಕೂರ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ನಂತರ ಬಂದ ನಿಕೊಲಾಸ್ ಹಾಗೂ ಮಿಚೆಲ್ ಅವರನ್ನು ಕುಲದೀಪ್ ಯಾದವ್ ಖೆಡ್ಡಾಕ್ಕೆ ಕೆಡವಿದರು, ಏಳನೇ ವಿಕೆಟ್ ಗೆ ಕ್ರೀಸ್ ಗೆ ಆಗಮಿಸಿದ ಮಿಚೆಲ್ ಬ್ರೆಸ್ವೆಲ್ 12 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ ಕೇವಲ 78 ಬಾಲ್ ಗೆ (140) ರನ್‌ಗಳ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಒಂದು ಹಂತದಲ್ಲಿ ವಿಕೆಟ್ ಕಳೆದುಕೊಂಡರೂ ಸಹ ವಿಚಲಿತನಾಗದೇ ಏಕಾಂಗಿಯಾಗಿ ಹೋರಾಟ ನಡೆಸಿದ ಬ್ರೆಸ್ವೆಲ್ ಎಲ್ಲರ ಮೆಚ್ಚುಗೆಗೆ ಪಾತ್ರರಾದರು, ಕೊನೆಯ 5 ಎಸೆತಗಳಲ್ಲಿ 13 ರನ್ ಬೇಕಿದ್ದಾಗ ಲಾರ್ಡ್ ಶಾದು೯ಲ್ ಠಾಕೂರ್ ಬೀಸಿದ ಎಲ್ ಬಿಗೆ ಬಲಿಯಾದರು.

337 ರನ್ ಗಳಿಸಿ ಆಲೌಟ್ ಆದ ಬ್ಲಾಕ್ ಕ್ಯಾಪ್ ಖ್ಯಾತಿಯ ನ್ಯೂಜಿಲೆಂಡ್ ಉತ್ತಮ ಹೋರಾಟ ನೀಡಿ ಕೊನೆಯಲ್ಲಿ ಪಂದ್ಯ ಕೈ ಚೆಲ್ಲಿತು, ಭಾರತದ ಪರವಾಗಿ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ ಕಬಳಿಸಿದರೆ, ಶಾದು೯ಲ್ ಠಾಕೂರ್ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು, ಅನುಭವಿ ಬೌಲರ್ ಶಮಿ ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ದುಬಾರಿಯಾದರು. ದ್ವಿಶತಕ ದಾಖಲಿಸಿದ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

7 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago