ಶೃಂಗೇರಿ ಮಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ

ಪಿ.ಎ. ಮುರುಳಿ ಅವರನ್ನ ಶೃಂಗೇರಿ ಮಠದ ನೂತನ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಶೃಂಗೇರಿ ಜಗದ್ಗುರು ಭಾರತೀ ತೀರ್ಥ ಶ್ರೀಗಳು ನೇಮಕ ಮಾಡಿದ್ದಾರೆ. 1986 ರಲ್ಲಿ ಶೃಂಗೇರಿ ಜಗದ್ಗುರು ಅಭಿನವ ವಿದ್ಯಾತೀರ್ಥ ಶ್ರೀಗಳಿಂದ ಗೌರಿ ಶಂಕರ್​ ಅವರು ಮಠದ ಆಡಳಿತಾಧಿಕಾರಿಯಾಗಿ ಈ ಹಿಂದೆ ನೇಮಕಗೊಂಡಿದ್ದರು.

38 ವರ್ಷ ಗೌರಿ ಶಂಕರ್ ಅವರು ಮಠದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸದ್ಯ ಮುರುಳಿ ಅವರಿಗೆ ಮುಖ್ಯ ಸಲಹೆಗಾರರಾಗಿ ಗೌರಿ ಶಂಕರ್ ಅವರು ಮುಂದುವರೆಯಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಫೆಬ್ರವರಿ 12ಕ್ಕೆ ಮಠದಲ್ಲಿ ಗೌರಿ ಶಂಕರ್​ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.

ಫೆಬ್ರವರಿ 12ಕ್ಕೆ ಕಿರಿಯ ಶ್ರೀ ವಿಧುಶೇಖರ ಶ್ರೀಗಳು ಸನ್ಯಾಸ ಸ್ವೀಕರಿಸಿ 9 ವರ್ಷ ಆಗುವುದರಿಂದ ಆ ದಿನದಂದು ಗೌರಿ ಶಂಕರ್ ಸಮರ್ಪಿತ ಸೇವೆಗೆ ಅಭಿನಂದನಾ ಸಮಾರಂಭ ಕೂಡ ನಡೆಯಲಿದೆ.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

4 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

5 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

18 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago