ತೋಟದ ಮನೆ ಮುಂದೆ ಶೆಡ್ ನಲ್ಲಿದ್ದ ಹಸು ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ.
ಹಸುವನ್ನು ಅರೆಬರೆ ತಿಂದು ಹೊತ್ತೊಯ್ಯಲು ಪ್ರಯತ್ನಿಸಿ ಪರಾರಿಯಾಗಿದೆ. ಈ ಘಟನೆ ತಡ ರಾತ್ರಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರೇಪುರ ಗ್ರಾಮದಲ್ಲಿ ನಡೆದಿದೆ..
ರೈತ ರಾಮಸ್ವಾಮಿ ಎಂಬುವವರು ತೋಟದ ಮನೆ ಮುಂದೆ ಶೆಡ್ ನಲ್ಲಿ ಹಸುಕಟ್ಟಿ ಮಲಗಿದ್ದರು. ಏಕಾಏಕಿ ಹಸು ಮೇಲೆ ದಾಳಿ ಮಾಡಿರುವ ಚಿರತೆ ಸುಮಾರು ನೂರು ಮೀಟರ್ನಷ್ಟು ಹಸುವನ್ನು ಎಳೆದೊಯ್ದಿದೆ. ಕೂಡಲೆ ಶಬ್ಧ ಕೇಳಿ ಮನೆಯಿಂದ ರೈತರು ಹೊರಬಂದ ಹಿನ್ನೆಲೆ ಚಿರತೆ ಪರಾರಿಯಾಗಿದೆ.
ರೈತ ರಾಮಸ್ವಾಮಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಸುಮಾರು ಐವತ್ತು ಸಾವಿರ ರೂಪಾಯಿ ಬೆಲೆ ಬಾಳುವ ಹಸು ಸಾವನ್ನಪ್ಪಿದೆ.
ಚಿರತೆ ಆತಂಕ ಹಿನ್ನೆಲೆ ಗ್ರಾಮಸ್ಥರು ಮಕ್ಕಳು ರಾತ್ರಿ ವೇಳೆ ಸಂಚರಿಸಲು ಭಯಬೀತರಾಗಿದ್ದಾರೆ.
ಈ ಹಿಂದೆ ಕರುವೊಂದನ್ನು ಚಿರತೆ ಹೊತ್ತೊಯ್ದಿದೆ ಎಂದು ರೈತ ರಾಮಸ್ವಾಮಿ ಅಳಲುತೋಡಿಕೊಂಡಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್ ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಜನ ಒತ್ತಾಯಿಸಿದ್ದಾರೆ.
ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…