ತೋಟದ ಮನೆ ಮುಂದೆ ಶೆಡ್ ನಲ್ಲಿದ್ದ ಹಸು ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ.
ಹಸುವನ್ನು ಅರೆಬರೆ ತಿಂದು ಹೊತ್ತೊಯ್ಯಲು ಪ್ರಯತ್ನಿಸಿ ಪರಾರಿಯಾಗಿದೆ. ಈ ಘಟನೆ ತಡ ರಾತ್ರಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರೇಪುರ ಗ್ರಾಮದಲ್ಲಿ ನಡೆದಿದೆ..
ರೈತ ರಾಮಸ್ವಾಮಿ ಎಂಬುವವರು ತೋಟದ ಮನೆ ಮುಂದೆ ಶೆಡ್ ನಲ್ಲಿ ಹಸುಕಟ್ಟಿ ಮಲಗಿದ್ದರು. ಏಕಾಏಕಿ ಹಸು ಮೇಲೆ ದಾಳಿ ಮಾಡಿರುವ ಚಿರತೆ ಸುಮಾರು ನೂರು ಮೀಟರ್ನಷ್ಟು ಹಸುವನ್ನು ಎಳೆದೊಯ್ದಿದೆ. ಕೂಡಲೆ ಶಬ್ಧ ಕೇಳಿ ಮನೆಯಿಂದ ರೈತರು ಹೊರಬಂದ ಹಿನ್ನೆಲೆ ಚಿರತೆ ಪರಾರಿಯಾಗಿದೆ.
ರೈತ ರಾಮಸ್ವಾಮಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಸುಮಾರು ಐವತ್ತು ಸಾವಿರ ರೂಪಾಯಿ ಬೆಲೆ ಬಾಳುವ ಹಸು ಸಾವನ್ನಪ್ಪಿದೆ.
ಚಿರತೆ ಆತಂಕ ಹಿನ್ನೆಲೆ ಗ್ರಾಮಸ್ಥರು ಮಕ್ಕಳು ರಾತ್ರಿ ವೇಳೆ ಸಂಚರಿಸಲು ಭಯಬೀತರಾಗಿದ್ದಾರೆ.
ಈ ಹಿಂದೆ ಕರುವೊಂದನ್ನು ಚಿರತೆ ಹೊತ್ತೊಯ್ದಿದೆ ಎಂದು ರೈತ ರಾಮಸ್ವಾಮಿ ಅಳಲುತೋಡಿಕೊಂಡಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್ ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಜನ ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…
14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…
ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ. ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…
ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…