ತೋಟದ ಮನೆ ಮುಂದೆ ಶೆಡ್ ನಲ್ಲಿದ್ದ ಹಸು ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ.
ಹಸುವನ್ನು ಅರೆಬರೆ ತಿಂದು ಹೊತ್ತೊಯ್ಯಲು ಪ್ರಯತ್ನಿಸಿ ಪರಾರಿಯಾಗಿದೆ. ಈ ಘಟನೆ ತಡ ರಾತ್ರಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರೇಪುರ ಗ್ರಾಮದಲ್ಲಿ ನಡೆದಿದೆ..
ರೈತ ರಾಮಸ್ವಾಮಿ ಎಂಬುವವರು ತೋಟದ ಮನೆ ಮುಂದೆ ಶೆಡ್ ನಲ್ಲಿ ಹಸುಕಟ್ಟಿ ಮಲಗಿದ್ದರು. ಏಕಾಏಕಿ ಹಸು ಮೇಲೆ ದಾಳಿ ಮಾಡಿರುವ ಚಿರತೆ ಸುಮಾರು ನೂರು ಮೀಟರ್ನಷ್ಟು ಹಸುವನ್ನು ಎಳೆದೊಯ್ದಿದೆ. ಕೂಡಲೆ ಶಬ್ಧ ಕೇಳಿ ಮನೆಯಿಂದ ರೈತರು ಹೊರಬಂದ ಹಿನ್ನೆಲೆ ಚಿರತೆ ಪರಾರಿಯಾಗಿದೆ.
ರೈತ ರಾಮಸ್ವಾಮಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಸುಮಾರು ಐವತ್ತು ಸಾವಿರ ರೂಪಾಯಿ ಬೆಲೆ ಬಾಳುವ ಹಸು ಸಾವನ್ನಪ್ಪಿದೆ.
ಚಿರತೆ ಆತಂಕ ಹಿನ್ನೆಲೆ ಗ್ರಾಮಸ್ಥರು ಮಕ್ಕಳು ರಾತ್ರಿ ವೇಳೆ ಸಂಚರಿಸಲು ಭಯಬೀತರಾಗಿದ್ದಾರೆ.
ಈ ಹಿಂದೆ ಕರುವೊಂದನ್ನು ಚಿರತೆ ಹೊತ್ತೊಯ್ದಿದೆ ಎಂದು ರೈತ ರಾಮಸ್ವಾಮಿ ಅಳಲುತೋಡಿಕೊಂಡಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್ ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಜನ ಒತ್ತಾಯಿಸಿದ್ದಾರೆ.
ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…