ತೋಟದ ಮನೆ ಮುಂದೆ ಶೆಡ್ ನಲ್ಲಿದ್ದ ಹಸು ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ.
ಹಸುವನ್ನು ಅರೆಬರೆ ತಿಂದು ಹೊತ್ತೊಯ್ಯಲು ಪ್ರಯತ್ನಿಸಿ ಪರಾರಿಯಾಗಿದೆ. ಈ ಘಟನೆ ತಡ ರಾತ್ರಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರೇಪುರ ಗ್ರಾಮದಲ್ಲಿ ನಡೆದಿದೆ..
ರೈತ ರಾಮಸ್ವಾಮಿ ಎಂಬುವವರು ತೋಟದ ಮನೆ ಮುಂದೆ ಶೆಡ್ ನಲ್ಲಿ ಹಸುಕಟ್ಟಿ ಮಲಗಿದ್ದರು. ಏಕಾಏಕಿ ಹಸು ಮೇಲೆ ದಾಳಿ ಮಾಡಿರುವ ಚಿರತೆ ಸುಮಾರು ನೂರು ಮೀಟರ್ನಷ್ಟು ಹಸುವನ್ನು ಎಳೆದೊಯ್ದಿದೆ. ಕೂಡಲೆ ಶಬ್ಧ ಕೇಳಿ ಮನೆಯಿಂದ ರೈತರು ಹೊರಬಂದ ಹಿನ್ನೆಲೆ ಚಿರತೆ ಪರಾರಿಯಾಗಿದೆ.
ರೈತ ರಾಮಸ್ವಾಮಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಸುಮಾರು ಐವತ್ತು ಸಾವಿರ ರೂಪಾಯಿ ಬೆಲೆ ಬಾಳುವ ಹಸು ಸಾವನ್ನಪ್ಪಿದೆ.
ಚಿರತೆ ಆತಂಕ ಹಿನ್ನೆಲೆ ಗ್ರಾಮಸ್ಥರು ಮಕ್ಕಳು ರಾತ್ರಿ ವೇಳೆ ಸಂಚರಿಸಲು ಭಯಬೀತರಾಗಿದ್ದಾರೆ.
ಈ ಹಿಂದೆ ಕರುವೊಂದನ್ನು ಚಿರತೆ ಹೊತ್ತೊಯ್ದಿದೆ ಎಂದು ರೈತ ರಾಮಸ್ವಾಮಿ ಅಳಲುತೋಡಿಕೊಂಡಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್ ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಜನ ಒತ್ತಾಯಿಸಿದ್ದಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…