ಶೋಭಾಯಾತ್ರೆಯಲ್ಲಿ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆ ಬಳಕೆ ಆರೋಪ: ದಲಿತ ಹಾಗೂ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ದೊಡ್ಡಬಳ್ಳಾಪುರದಲ್ಲಿ ಭಾನುವಾರ ವಿಶ್ವ ಹಿಂದೂ ಪರಿಷತ್‌, ಬಜರಂಗದಳದಿಂದ ನಡೆದ ಶೋಭಾಯಾತ್ರೆಯಲ್ಲಿ ಇತರೆ ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮುಖಂಡ‌ ಜಿ.ಲಕ್ಷ್ಮೀಪತಿ, ಶೋಭಾಯಾತ್ರೆಗೆ ನಮ್ಮ ವಿರೋಧವಿಲ್ಲ. ಶೋಭಾಯಾತ್ರೆಯಲ್ಲಿ ರಾಮ, ಆಂಜನೇಯ, ಶಿವ ಪ್ರತಿಮೆಗಳ ಜೊತೆ ಅಂಬೇಡ್ಕರ್ ಪ್ರತಿಮೆಯನ್ನು ಮೆರವಣಿಗೆ ಮಾಡಲಾಯಿತು. ಇದಕ್ಕೆ ನಮ್ಮ ತಂಟೆ ತಕರಾರು ಇಲ್ಲ. ಆದರೆ, ಶಿವ, ಶ್ರೀರಾಮ, ಆಂಜನೇಯ ಪ್ರತಿಮೆಗಳು ದೊಡ್ಡದಾಗಿದ್ದು, ಅಂಬೇಡ್ಕರ್ ಪ್ರತಿಮೆ ಮಾತ್ರ ಚಿಕ್ಕದಾಗಿದೆ. ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದ್ದು, ಇದಕ್ಕೆ ನಮ್ಮ ವಿರೋಧವಿದೆ. ಕೂಡಲೇ ಇದಕ್ಕೆ ಸಂಬಂಧಪಟ್ಟವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಶೋಭಾಯಾತ್ರೆಯಲ್ಲಿ ಇತ್ತೀಚೆಗಷ್ಟೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಮೆರವಣಿಗೆಯಲ್ಲಿ‌‌ ಬಳಸಲಾಗುತ್ತಿದೆ. ಇದೂವರೆಗೂ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಲ್ಲ. ಇದೀಗ ಇದ್ದಕ್ಕಿದ್ದಾಗೆ ಅಂಬೇಡ್ಕರ್ ಅವರ ಬಗ್ಗೆ ಜ್ಞಾನೋದಯವಾಗಿದೆ. ರಾಮಮಂದಿರ ವಿಚಾರ ಮುಗಿದ ಮೇಲೆ ವೋಟ್ ಬ್ಯಾಂಕ್ ಗಾಗಿ ಅಂಬೇಡ್ಕರ್ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ತುಳಿತಕ್ಕೊಳಗಾದವರನ್ನು ಸಂವಿಧಾನ ಮೂಲಕ ಮೇಲಕ್ಕೆತ್ತಿದ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರೇ ನಮಗೆ ದೇವರು. ನಾವು ಅಂಬೇಡ್ಕರ್ ಅವರನ್ನು ದೇವರೆಂದೇ ಭಾವಿಸಿ ಪೂಜೆ ಮಾಡುತ್ತೇವೆ. ನಾವು ಪೂಜೆ ಮಾಡುವ ದೇವರನ್ನು ಮತಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ನಂತರ ಎಲ್ಲಾ ಮುಖಂಡರು ಸೇರಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಈ ವೇಳೆ ದಲಿತ ಹಾಗೂ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

42 minutes ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

4 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

5 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

7 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

7 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

8 hours ago