ದೊಡ್ಡಬಳ್ಳಾಪುರದಲ್ಲಿ ಭಾನುವಾರ ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ನಡೆದ ಶೋಭಾಯಾತ್ರೆಯಲ್ಲಿ ಇತರೆ ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮುಖಂಡ ಜಿ.ಲಕ್ಷ್ಮೀಪತಿ, ಶೋಭಾಯಾತ್ರೆಗೆ ನಮ್ಮ ವಿರೋಧವಿಲ್ಲ. ಶೋಭಾಯಾತ್ರೆಯಲ್ಲಿ ರಾಮ, ಆಂಜನೇಯ, ಶಿವ ಪ್ರತಿಮೆಗಳ ಜೊತೆ ಅಂಬೇಡ್ಕರ್ ಪ್ರತಿಮೆಯನ್ನು ಮೆರವಣಿಗೆ ಮಾಡಲಾಯಿತು. ಇದಕ್ಕೆ ನಮ್ಮ ತಂಟೆ ತಕರಾರು ಇಲ್ಲ. ಆದರೆ, ಶಿವ, ಶ್ರೀರಾಮ, ಆಂಜನೇಯ ಪ್ರತಿಮೆಗಳು ದೊಡ್ಡದಾಗಿದ್ದು, ಅಂಬೇಡ್ಕರ್ ಪ್ರತಿಮೆ ಮಾತ್ರ ಚಿಕ್ಕದಾಗಿದೆ. ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದ್ದು, ಇದಕ್ಕೆ ನಮ್ಮ ವಿರೋಧವಿದೆ. ಕೂಡಲೇ ಇದಕ್ಕೆ ಸಂಬಂಧಪಟ್ಟವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ತುಳಿತಕ್ಕೊಳಗಾದವರನ್ನು ಸಂವಿಧಾನ ಮೂಲಕ ಮೇಲಕ್ಕೆತ್ತಿದ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರೇ ನಮಗೆ ದೇವರು. ನಾವು ಅಂಬೇಡ್ಕರ್ ಅವರನ್ನು ದೇವರೆಂದೇ ಭಾವಿಸಿ ಪೂಜೆ ಮಾಡುತ್ತೇವೆ. ನಾವು ಪೂಜೆ ಮಾಡುವ ದೇವರನ್ನು ಮತಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ನಂತರ ಎಲ್ಲಾ ಮುಖಂಡರು ಸೇರಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.
ಈ ವೇಳೆ ದಲಿತ ಹಾಗೂ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…