ಶೋಭಾಯಾತ್ರೆಯಲ್ಲಿ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆ ಬಳಕೆ ಆರೋಪ: ದಲಿತ ಹಾಗೂ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ದೊಡ್ಡಬಳ್ಳಾಪುರದಲ್ಲಿ ಭಾನುವಾರ ವಿಶ್ವ ಹಿಂದೂ ಪರಿಷತ್‌, ಬಜರಂಗದಳದಿಂದ ನಡೆದ ಶೋಭಾಯಾತ್ರೆಯಲ್ಲಿ ಇತರೆ ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮುಖಂಡ‌ ಜಿ.ಲಕ್ಷ್ಮೀಪತಿ, ಶೋಭಾಯಾತ್ರೆಗೆ ನಮ್ಮ ವಿರೋಧವಿಲ್ಲ. ಶೋಭಾಯಾತ್ರೆಯಲ್ಲಿ ರಾಮ, ಆಂಜನೇಯ, ಶಿವ ಪ್ರತಿಮೆಗಳ ಜೊತೆ ಅಂಬೇಡ್ಕರ್ ಪ್ರತಿಮೆಯನ್ನು ಮೆರವಣಿಗೆ ಮಾಡಲಾಯಿತು. ಇದಕ್ಕೆ ನಮ್ಮ ತಂಟೆ ತಕರಾರು ಇಲ್ಲ. ಆದರೆ, ಶಿವ, ಶ್ರೀರಾಮ, ಆಂಜನೇಯ ಪ್ರತಿಮೆಗಳು ದೊಡ್ಡದಾಗಿದ್ದು, ಅಂಬೇಡ್ಕರ್ ಪ್ರತಿಮೆ ಮಾತ್ರ ಚಿಕ್ಕದಾಗಿದೆ. ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದ್ದು, ಇದಕ್ಕೆ ನಮ್ಮ ವಿರೋಧವಿದೆ. ಕೂಡಲೇ ಇದಕ್ಕೆ ಸಂಬಂಧಪಟ್ಟವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಶೋಭಾಯಾತ್ರೆಯಲ್ಲಿ ಇತ್ತೀಚೆಗಷ್ಟೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಮೆರವಣಿಗೆಯಲ್ಲಿ‌‌ ಬಳಸಲಾಗುತ್ತಿದೆ. ಇದೂವರೆಗೂ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಲ್ಲ. ಇದೀಗ ಇದ್ದಕ್ಕಿದ್ದಾಗೆ ಅಂಬೇಡ್ಕರ್ ಅವರ ಬಗ್ಗೆ ಜ್ಞಾನೋದಯವಾಗಿದೆ. ರಾಮಮಂದಿರ ವಿಚಾರ ಮುಗಿದ ಮೇಲೆ ವೋಟ್ ಬ್ಯಾಂಕ್ ಗಾಗಿ ಅಂಬೇಡ್ಕರ್ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ತುಳಿತಕ್ಕೊಳಗಾದವರನ್ನು ಸಂವಿಧಾನ ಮೂಲಕ ಮೇಲಕ್ಕೆತ್ತಿದ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರೇ ನಮಗೆ ದೇವರು. ನಾವು ಅಂಬೇಡ್ಕರ್ ಅವರನ್ನು ದೇವರೆಂದೇ ಭಾವಿಸಿ ಪೂಜೆ ಮಾಡುತ್ತೇವೆ. ನಾವು ಪೂಜೆ ಮಾಡುವ ದೇವರನ್ನು ಮತಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ನಂತರ ಎಲ್ಲಾ ಮುಖಂಡರು ಸೇರಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಈ ವೇಳೆ ದಲಿತ ಹಾಗೂ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

40 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 hour ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

11 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago