ಶೋಭಾಯಾತ್ರೆಯಲ್ಲಿ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆ ಬಳಕೆ ಆರೋಪ: ದಲಿತ ಹಾಗೂ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ದೊಡ್ಡಬಳ್ಳಾಪುರದಲ್ಲಿ ಭಾನುವಾರ ವಿಶ್ವ ಹಿಂದೂ ಪರಿಷತ್‌, ಬಜರಂಗದಳದಿಂದ ನಡೆದ ಶೋಭಾಯಾತ್ರೆಯಲ್ಲಿ ಇತರೆ ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮುಖಂಡ‌ ಜಿ.ಲಕ್ಷ್ಮೀಪತಿ, ಶೋಭಾಯಾತ್ರೆಗೆ ನಮ್ಮ ವಿರೋಧವಿಲ್ಲ. ಶೋಭಾಯಾತ್ರೆಯಲ್ಲಿ ರಾಮ, ಆಂಜನೇಯ, ಶಿವ ಪ್ರತಿಮೆಗಳ ಜೊತೆ ಅಂಬೇಡ್ಕರ್ ಪ್ರತಿಮೆಯನ್ನು ಮೆರವಣಿಗೆ ಮಾಡಲಾಯಿತು. ಇದಕ್ಕೆ ನಮ್ಮ ತಂಟೆ ತಕರಾರು ಇಲ್ಲ. ಆದರೆ, ಶಿವ, ಶ್ರೀರಾಮ, ಆಂಜನೇಯ ಪ್ರತಿಮೆಗಳು ದೊಡ್ಡದಾಗಿದ್ದು, ಅಂಬೇಡ್ಕರ್ ಪ್ರತಿಮೆ ಮಾತ್ರ ಚಿಕ್ಕದಾಗಿದೆ. ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದ್ದು, ಇದಕ್ಕೆ ನಮ್ಮ ವಿರೋಧವಿದೆ. ಕೂಡಲೇ ಇದಕ್ಕೆ ಸಂಬಂಧಪಟ್ಟವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಶೋಭಾಯಾತ್ರೆಯಲ್ಲಿ ಇತ್ತೀಚೆಗಷ್ಟೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಮೆರವಣಿಗೆಯಲ್ಲಿ‌‌ ಬಳಸಲಾಗುತ್ತಿದೆ. ಇದೂವರೆಗೂ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಲ್ಲ. ಇದೀಗ ಇದ್ದಕ್ಕಿದ್ದಾಗೆ ಅಂಬೇಡ್ಕರ್ ಅವರ ಬಗ್ಗೆ ಜ್ಞಾನೋದಯವಾಗಿದೆ. ರಾಮಮಂದಿರ ವಿಚಾರ ಮುಗಿದ ಮೇಲೆ ವೋಟ್ ಬ್ಯಾಂಕ್ ಗಾಗಿ ಅಂಬೇಡ್ಕರ್ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ತುಳಿತಕ್ಕೊಳಗಾದವರನ್ನು ಸಂವಿಧಾನ ಮೂಲಕ ಮೇಲಕ್ಕೆತ್ತಿದ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರೇ ನಮಗೆ ದೇವರು. ನಾವು ಅಂಬೇಡ್ಕರ್ ಅವರನ್ನು ದೇವರೆಂದೇ ಭಾವಿಸಿ ಪೂಜೆ ಮಾಡುತ್ತೇವೆ. ನಾವು ಪೂಜೆ ಮಾಡುವ ದೇವರನ್ನು ಮತಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ನಂತರ ಎಲ್ಲಾ ಮುಖಂಡರು ಸೇರಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಈ ವೇಳೆ ದಲಿತ ಹಾಗೂ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

5 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

17 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

18 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

19 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

19 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago