Categories: ಕೋಲಾರ

ಶೋಷಣೆ, ದಬ್ಬಾಳಿಕೆಯ ಪಿಡುಗು ಹೋಗಲಾಡಿಸುವ ಚಿಂತನೆಗಳು ಬರಬೇಕಾಗಿದೆ-ಎಂಎಲ್ ಸಿ ನಾಗರಾಜ್ ಯಾದವ್

ಕೋಲಾರ: ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆ ಇದ್ದು ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ತಿಳಿಸಿದರು.

ನಗರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಆರ್ ಶಂಕರಪ್ಪ ಅವರಿಗೆ ಅಭಿನಂದನೆ, ಬೀಳ್ಕೊಡುಗೆ ಹಾಗೂ ಕರ್ನಾಟಕ ರಾಜಕೀಯ ಇತಿಹಾಸ ಮತ್ತು ಆಡಳಿತ, ಸ್ಪರ್ಧಾ ದಾರಿದೀಪ ಎರಡು ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಇವತ್ತು ಒಂದು ಕಡೆ ಶೋಷಣೆ ಮತ್ತೊಂದು ಕಡೆ ಭ್ರಷ್ಟಾಚಾರ ಕೋಮುವಾದವು ಸಮಾಜಕ್ಕೆ ಕಳಂಕ ತಂದಿದೆ ಇದನ್ನು ಹೋಗಲಾಡಿಸಲು ಯುವಜನರಲ್ಲಿ ಅರಿವು ಮುಖ್ಯವಾಗಿದೆ ಇದಕ್ಕೆ ಬರವಣಿಗೆ ಮತ್ತು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.

ಶಿಕ್ಷಕ ವೃತ್ತಿಯಿಂದ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಾಗಿದೆ ವಿಧ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳು ಅಷ್ಟೇ ಭವಿಷ್ಯವನ್ನು ರೂಪಿಸುವುದಿಲ್ಲ ಪ್ರೀತಿ ವಿಶ್ವಾಸದಿಂದ ಅವರಿಗೆ ಹೊಣೆಗಾರಿಯ ಜವಾಬ್ದಾರಿಯನ್ನು ವಹಿಸಬೇಕಾಗಿದೆ ಯುವ ಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಜೊತೆಗೆ ವಿವಿಧ ವಿಚಾರಗಳ ಸಂಶೋಧನೆಗಳ ಕಡೆಗೆ ಗಮನ ಹರಿಸಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗಿದೆ ಕೋಲಾರದಲ್ಲಿ ಸರಿ ಸುಮಾರು 75 ವರ್ಷಗಳ ಇತಿಹಾಸವಿರುವ ಬಾಲಕರ ಕಾಲೇಜಿಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದ ಸಿಎಂ.ಡಿಸಿಎಂ ಜೊತೆಗೆ ಚರ್ಚಿಸಿ ಅನುದಾನ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳನ್ನು ಓದುವ ಪ್ರವೃತ್ತಿ ಕಡಿಮೆಯಾಗಿದೆ ಹೊಸ ತಲೆಮಾರಿನ ಜನರು ಜ್ಞಾನದ ಕಡೆಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ ಡಾ.ಶಂಕರಪ್ಪ ನವರು ಸರಕಾರಿ ಸೇವೆಯಿಂದ ಅಷ್ಟೇ ನಿವೃತ್ತಿಯಾಗಿದ್ದಾರೆ ಮುಂದೆ ಅವರು ಬರವಣಿಗೆ ಹೆಚ್ಚಿನ ಸಮಯ ವಹಿಸಲಿದ್ದಾರೆ ಯಾರೇ ಸರಕಾರಿ ನೌಕರರಾಗಿ ನಿವೃತ್ತಿ ಹೊಂದಿದ ದಿನವೇ ಕನಿಷ್ಠ ಅವರಿಗೆ ಸರಕಾರದಿಂದ ಸಿಗುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕೊಡುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮತ್ತು ಸರಕಾರ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಂಕರಪ್ಪ, ನನ್ನ ಬರವಣಿಗೆ ಮತ್ತು ಪ್ರಾಧ್ಯಾಪಕ ವೃತ್ತಿಯಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಸಮಾಜಕ್ಕೆ ಏನಾದರೂ ಕೊಡುಗೆಯಾಗಿ ನೀಡಬೇಕು ಎಂದು ಬೋಧನೆಯ ಜೊತೆಗೆ ಬರವಣಿಗೆ ಆಯ್ಕೆ ಮಾಡಿಕೊಂಡಿದ್ದೇನೆ ಸಮಾಜದಲ್ಲಿ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ, ನೈತಿಕ, ಜ್ಞಾನ, ಹಾಗೂ ಕಲಿಕೆ ಆಧಾರಿತ ಶಿಕ್ಷಣವನ್ನು ಕಲಿಸಬೇಕು ಮನುಷ್ಯನ ವಿಕಸನಕ್ಕೆ ನಾಲ್ಕು ಮುಖ್ಯ ಅಂಶಗಳಾಗಿವೆ ಎಂದರು,

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ತ್ಯಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೆಂಕಟಾಚಲಪತಿ, ಸಮಾಜಸೇವಕ ಶಬರೀಷ್ ಯಾದವ್, ನಿವೃತ್ತ ಪ್ರಾಂಶುಪಾಲ ಎ.ವಿ ರೆಡ್ಡಿ, ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ, ಶಂಕರಪ್ಪ ನವರ ಧರ್ಮಪತ್ನಿ ಉಷಾರಾಣಿ ಮುಂತಾದವರು ಇದ್ದರು

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

9 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

9 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

15 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

1 day ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago