Categories: ಕೋಲಾರ

ಶೋಷಣೆ, ದಬ್ಬಾಳಿಕೆಯ ಪಿಡುಗು ಹೋಗಲಾಡಿಸುವ ಚಿಂತನೆಗಳು ಬರಬೇಕಾಗಿದೆ-ಎಂಎಲ್ ಸಿ ನಾಗರಾಜ್ ಯಾದವ್

ಕೋಲಾರ: ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆ ಇದ್ದು ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ತಿಳಿಸಿದರು.

ನಗರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಆರ್ ಶಂಕರಪ್ಪ ಅವರಿಗೆ ಅಭಿನಂದನೆ, ಬೀಳ್ಕೊಡುಗೆ ಹಾಗೂ ಕರ್ನಾಟಕ ರಾಜಕೀಯ ಇತಿಹಾಸ ಮತ್ತು ಆಡಳಿತ, ಸ್ಪರ್ಧಾ ದಾರಿದೀಪ ಎರಡು ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಇವತ್ತು ಒಂದು ಕಡೆ ಶೋಷಣೆ ಮತ್ತೊಂದು ಕಡೆ ಭ್ರಷ್ಟಾಚಾರ ಕೋಮುವಾದವು ಸಮಾಜಕ್ಕೆ ಕಳಂಕ ತಂದಿದೆ ಇದನ್ನು ಹೋಗಲಾಡಿಸಲು ಯುವಜನರಲ್ಲಿ ಅರಿವು ಮುಖ್ಯವಾಗಿದೆ ಇದಕ್ಕೆ ಬರವಣಿಗೆ ಮತ್ತು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.

ಶಿಕ್ಷಕ ವೃತ್ತಿಯಿಂದ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಾಗಿದೆ ವಿಧ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳು ಅಷ್ಟೇ ಭವಿಷ್ಯವನ್ನು ರೂಪಿಸುವುದಿಲ್ಲ ಪ್ರೀತಿ ವಿಶ್ವಾಸದಿಂದ ಅವರಿಗೆ ಹೊಣೆಗಾರಿಯ ಜವಾಬ್ದಾರಿಯನ್ನು ವಹಿಸಬೇಕಾಗಿದೆ ಯುವ ಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಜೊತೆಗೆ ವಿವಿಧ ವಿಚಾರಗಳ ಸಂಶೋಧನೆಗಳ ಕಡೆಗೆ ಗಮನ ಹರಿಸಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗಿದೆ ಕೋಲಾರದಲ್ಲಿ ಸರಿ ಸುಮಾರು 75 ವರ್ಷಗಳ ಇತಿಹಾಸವಿರುವ ಬಾಲಕರ ಕಾಲೇಜಿಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದ ಸಿಎಂ.ಡಿಸಿಎಂ ಜೊತೆಗೆ ಚರ್ಚಿಸಿ ಅನುದಾನ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳನ್ನು ಓದುವ ಪ್ರವೃತ್ತಿ ಕಡಿಮೆಯಾಗಿದೆ ಹೊಸ ತಲೆಮಾರಿನ ಜನರು ಜ್ಞಾನದ ಕಡೆಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ ಡಾ.ಶಂಕರಪ್ಪ ನವರು ಸರಕಾರಿ ಸೇವೆಯಿಂದ ಅಷ್ಟೇ ನಿವೃತ್ತಿಯಾಗಿದ್ದಾರೆ ಮುಂದೆ ಅವರು ಬರವಣಿಗೆ ಹೆಚ್ಚಿನ ಸಮಯ ವಹಿಸಲಿದ್ದಾರೆ ಯಾರೇ ಸರಕಾರಿ ನೌಕರರಾಗಿ ನಿವೃತ್ತಿ ಹೊಂದಿದ ದಿನವೇ ಕನಿಷ್ಠ ಅವರಿಗೆ ಸರಕಾರದಿಂದ ಸಿಗುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕೊಡುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮತ್ತು ಸರಕಾರ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಂಕರಪ್ಪ, ನನ್ನ ಬರವಣಿಗೆ ಮತ್ತು ಪ್ರಾಧ್ಯಾಪಕ ವೃತ್ತಿಯಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಸಮಾಜಕ್ಕೆ ಏನಾದರೂ ಕೊಡುಗೆಯಾಗಿ ನೀಡಬೇಕು ಎಂದು ಬೋಧನೆಯ ಜೊತೆಗೆ ಬರವಣಿಗೆ ಆಯ್ಕೆ ಮಾಡಿಕೊಂಡಿದ್ದೇನೆ ಸಮಾಜದಲ್ಲಿ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ, ನೈತಿಕ, ಜ್ಞಾನ, ಹಾಗೂ ಕಲಿಕೆ ಆಧಾರಿತ ಶಿಕ್ಷಣವನ್ನು ಕಲಿಸಬೇಕು ಮನುಷ್ಯನ ವಿಕಸನಕ್ಕೆ ನಾಲ್ಕು ಮುಖ್ಯ ಅಂಶಗಳಾಗಿವೆ ಎಂದರು,

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ತ್ಯಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೆಂಕಟಾಚಲಪತಿ, ಸಮಾಜಸೇವಕ ಶಬರೀಷ್ ಯಾದವ್, ನಿವೃತ್ತ ಪ್ರಾಂಶುಪಾಲ ಎ.ವಿ ರೆಡ್ಡಿ, ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ, ಶಂಕರಪ್ಪ ನವರ ಧರ್ಮಪತ್ನಿ ಉಷಾರಾಣಿ ಮುಂತಾದವರು ಇದ್ದರು

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

19 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago