ಕೋಲಾರ: ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆ ಇದ್ದು ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ತಿಳಿಸಿದರು.
ನಗರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಆರ್ ಶಂಕರಪ್ಪ ಅವರಿಗೆ ಅಭಿನಂದನೆ, ಬೀಳ್ಕೊಡುಗೆ ಹಾಗೂ ಕರ್ನಾಟಕ ರಾಜಕೀಯ ಇತಿಹಾಸ ಮತ್ತು ಆಡಳಿತ, ಸ್ಪರ್ಧಾ ದಾರಿದೀಪ ಎರಡು ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಇವತ್ತು ಒಂದು ಕಡೆ ಶೋಷಣೆ ಮತ್ತೊಂದು ಕಡೆ ಭ್ರಷ್ಟಾಚಾರ ಕೋಮುವಾದವು ಸಮಾಜಕ್ಕೆ ಕಳಂಕ ತಂದಿದೆ ಇದನ್ನು ಹೋಗಲಾಡಿಸಲು ಯುವಜನರಲ್ಲಿ ಅರಿವು ಮುಖ್ಯವಾಗಿದೆ ಇದಕ್ಕೆ ಬರವಣಿಗೆ ಮತ್ತು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.
ಶಿಕ್ಷಕ ವೃತ್ತಿಯಿಂದ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಾಗಿದೆ ವಿಧ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳು ಅಷ್ಟೇ ಭವಿಷ್ಯವನ್ನು ರೂಪಿಸುವುದಿಲ್ಲ ಪ್ರೀತಿ ವಿಶ್ವಾಸದಿಂದ ಅವರಿಗೆ ಹೊಣೆಗಾರಿಯ ಜವಾಬ್ದಾರಿಯನ್ನು ವಹಿಸಬೇಕಾಗಿದೆ ಯುವ ಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಜೊತೆಗೆ ವಿವಿಧ ವಿಚಾರಗಳ ಸಂಶೋಧನೆಗಳ ಕಡೆಗೆ ಗಮನ ಹರಿಸಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗಿದೆ ಕೋಲಾರದಲ್ಲಿ ಸರಿ ಸುಮಾರು 75 ವರ್ಷಗಳ ಇತಿಹಾಸವಿರುವ ಬಾಲಕರ ಕಾಲೇಜಿಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದ ಸಿಎಂ.ಡಿಸಿಎಂ ಜೊತೆಗೆ ಚರ್ಚಿಸಿ ಅನುದಾನ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳನ್ನು ಓದುವ ಪ್ರವೃತ್ತಿ ಕಡಿಮೆಯಾಗಿದೆ ಹೊಸ ತಲೆಮಾರಿನ ಜನರು ಜ್ಞಾನದ ಕಡೆಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ ಡಾ.ಶಂಕರಪ್ಪ ನವರು ಸರಕಾರಿ ಸೇವೆಯಿಂದ ಅಷ್ಟೇ ನಿವೃತ್ತಿಯಾಗಿದ್ದಾರೆ ಮುಂದೆ ಅವರು ಬರವಣಿಗೆ ಹೆಚ್ಚಿನ ಸಮಯ ವಹಿಸಲಿದ್ದಾರೆ ಯಾರೇ ಸರಕಾರಿ ನೌಕರರಾಗಿ ನಿವೃತ್ತಿ ಹೊಂದಿದ ದಿನವೇ ಕನಿಷ್ಠ ಅವರಿಗೆ ಸರಕಾರದಿಂದ ಸಿಗುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕೊಡುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮತ್ತು ಸರಕಾರ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಂಕರಪ್ಪ, ನನ್ನ ಬರವಣಿಗೆ ಮತ್ತು ಪ್ರಾಧ್ಯಾಪಕ ವೃತ್ತಿಯಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಸಮಾಜಕ್ಕೆ ಏನಾದರೂ ಕೊಡುಗೆಯಾಗಿ ನೀಡಬೇಕು ಎಂದು ಬೋಧನೆಯ ಜೊತೆಗೆ ಬರವಣಿಗೆ ಆಯ್ಕೆ ಮಾಡಿಕೊಂಡಿದ್ದೇನೆ ಸಮಾಜದಲ್ಲಿ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ, ನೈತಿಕ, ಜ್ಞಾನ, ಹಾಗೂ ಕಲಿಕೆ ಆಧಾರಿತ ಶಿಕ್ಷಣವನ್ನು ಕಲಿಸಬೇಕು ಮನುಷ್ಯನ ವಿಕಸನಕ್ಕೆ ನಾಲ್ಕು ಮುಖ್ಯ ಅಂಶಗಳಾಗಿವೆ ಎಂದರು,
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ತ್ಯಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೆಂಕಟಾಚಲಪತಿ, ಸಮಾಜಸೇವಕ ಶಬರೀಷ್ ಯಾದವ್, ನಿವೃತ್ತ ಪ್ರಾಂಶುಪಾಲ ಎ.ವಿ ರೆಡ್ಡಿ, ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ, ಶಂಕರಪ್ಪ ನವರ ಧರ್ಮಪತ್ನಿ ಉಷಾರಾಣಿ ಮುಂತಾದವರು ಇದ್ದರು
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…