Categories: ಕೋಲಾರ

ಶೋಷಣೆ, ದಬ್ಬಾಳಿಕೆಯ ಪಿಡುಗು ಹೋಗಲಾಡಿಸುವ ಚಿಂತನೆಗಳು ಬರಬೇಕಾಗಿದೆ-ಎಂಎಲ್ ಸಿ ನಾಗರಾಜ್ ಯಾದವ್

ಕೋಲಾರ: ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆ ಇದ್ದು ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ತಿಳಿಸಿದರು.

ನಗರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಆರ್ ಶಂಕರಪ್ಪ ಅವರಿಗೆ ಅಭಿನಂದನೆ, ಬೀಳ್ಕೊಡುಗೆ ಹಾಗೂ ಕರ್ನಾಟಕ ರಾಜಕೀಯ ಇತಿಹಾಸ ಮತ್ತು ಆಡಳಿತ, ಸ್ಪರ್ಧಾ ದಾರಿದೀಪ ಎರಡು ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಇವತ್ತು ಒಂದು ಕಡೆ ಶೋಷಣೆ ಮತ್ತೊಂದು ಕಡೆ ಭ್ರಷ್ಟಾಚಾರ ಕೋಮುವಾದವು ಸಮಾಜಕ್ಕೆ ಕಳಂಕ ತಂದಿದೆ ಇದನ್ನು ಹೋಗಲಾಡಿಸಲು ಯುವಜನರಲ್ಲಿ ಅರಿವು ಮುಖ್ಯವಾಗಿದೆ ಇದಕ್ಕೆ ಬರವಣಿಗೆ ಮತ್ತು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.

ಶಿಕ್ಷಕ ವೃತ್ತಿಯಿಂದ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಾಗಿದೆ ವಿಧ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳು ಅಷ್ಟೇ ಭವಿಷ್ಯವನ್ನು ರೂಪಿಸುವುದಿಲ್ಲ ಪ್ರೀತಿ ವಿಶ್ವಾಸದಿಂದ ಅವರಿಗೆ ಹೊಣೆಗಾರಿಯ ಜವಾಬ್ದಾರಿಯನ್ನು ವಹಿಸಬೇಕಾಗಿದೆ ಯುವ ಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಜೊತೆಗೆ ವಿವಿಧ ವಿಚಾರಗಳ ಸಂಶೋಧನೆಗಳ ಕಡೆಗೆ ಗಮನ ಹರಿಸಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗಿದೆ ಕೋಲಾರದಲ್ಲಿ ಸರಿ ಸುಮಾರು 75 ವರ್ಷಗಳ ಇತಿಹಾಸವಿರುವ ಬಾಲಕರ ಕಾಲೇಜಿಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದ ಸಿಎಂ.ಡಿಸಿಎಂ ಜೊತೆಗೆ ಚರ್ಚಿಸಿ ಅನುದಾನ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳನ್ನು ಓದುವ ಪ್ರವೃತ್ತಿ ಕಡಿಮೆಯಾಗಿದೆ ಹೊಸ ತಲೆಮಾರಿನ ಜನರು ಜ್ಞಾನದ ಕಡೆಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ ಡಾ.ಶಂಕರಪ್ಪ ನವರು ಸರಕಾರಿ ಸೇವೆಯಿಂದ ಅಷ್ಟೇ ನಿವೃತ್ತಿಯಾಗಿದ್ದಾರೆ ಮುಂದೆ ಅವರು ಬರವಣಿಗೆ ಹೆಚ್ಚಿನ ಸಮಯ ವಹಿಸಲಿದ್ದಾರೆ ಯಾರೇ ಸರಕಾರಿ ನೌಕರರಾಗಿ ನಿವೃತ್ತಿ ಹೊಂದಿದ ದಿನವೇ ಕನಿಷ್ಠ ಅವರಿಗೆ ಸರಕಾರದಿಂದ ಸಿಗುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕೊಡುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮತ್ತು ಸರಕಾರ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಂಕರಪ್ಪ, ನನ್ನ ಬರವಣಿಗೆ ಮತ್ತು ಪ್ರಾಧ್ಯಾಪಕ ವೃತ್ತಿಯಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಸಮಾಜಕ್ಕೆ ಏನಾದರೂ ಕೊಡುಗೆಯಾಗಿ ನೀಡಬೇಕು ಎಂದು ಬೋಧನೆಯ ಜೊತೆಗೆ ಬರವಣಿಗೆ ಆಯ್ಕೆ ಮಾಡಿಕೊಂಡಿದ್ದೇನೆ ಸಮಾಜದಲ್ಲಿ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ, ನೈತಿಕ, ಜ್ಞಾನ, ಹಾಗೂ ಕಲಿಕೆ ಆಧಾರಿತ ಶಿಕ್ಷಣವನ್ನು ಕಲಿಸಬೇಕು ಮನುಷ್ಯನ ವಿಕಸನಕ್ಕೆ ನಾಲ್ಕು ಮುಖ್ಯ ಅಂಶಗಳಾಗಿವೆ ಎಂದರು,

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ತ್ಯಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೆಂಕಟಾಚಲಪತಿ, ಸಮಾಜಸೇವಕ ಶಬರೀಷ್ ಯಾದವ್, ನಿವೃತ್ತ ಪ್ರಾಂಶುಪಾಲ ಎ.ವಿ ರೆಡ್ಡಿ, ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ, ಶಂಕರಪ್ಪ ನವರ ಧರ್ಮಪತ್ನಿ ಉಷಾರಾಣಿ ಮುಂತಾದವರು ಇದ್ದರು

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

10 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

10 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

13 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

14 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

18 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

22 hours ago