Categories: ಕೋಲಾರ

ಶೋಷಣೆ, ದಬ್ಬಾಳಿಕೆಯ ಪಿಡುಗು ಹೋಗಲಾಡಿಸುವ ಚಿಂತನೆಗಳು ಬರಬೇಕಾಗಿದೆ-ಎಂಎಲ್ ಸಿ ನಾಗರಾಜ್ ಯಾದವ್

ಕೋಲಾರ: ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆ ಇದ್ದು ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ತಿಳಿಸಿದರು.

ನಗರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಆರ್ ಶಂಕರಪ್ಪ ಅವರಿಗೆ ಅಭಿನಂದನೆ, ಬೀಳ್ಕೊಡುಗೆ ಹಾಗೂ ಕರ್ನಾಟಕ ರಾಜಕೀಯ ಇತಿಹಾಸ ಮತ್ತು ಆಡಳಿತ, ಸ್ಪರ್ಧಾ ದಾರಿದೀಪ ಎರಡು ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಇವತ್ತು ಒಂದು ಕಡೆ ಶೋಷಣೆ ಮತ್ತೊಂದು ಕಡೆ ಭ್ರಷ್ಟಾಚಾರ ಕೋಮುವಾದವು ಸಮಾಜಕ್ಕೆ ಕಳಂಕ ತಂದಿದೆ ಇದನ್ನು ಹೋಗಲಾಡಿಸಲು ಯುವಜನರಲ್ಲಿ ಅರಿವು ಮುಖ್ಯವಾಗಿದೆ ಇದಕ್ಕೆ ಬರವಣಿಗೆ ಮತ್ತು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.

ಶಿಕ್ಷಕ ವೃತ್ತಿಯಿಂದ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಾಗಿದೆ ವಿಧ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳು ಅಷ್ಟೇ ಭವಿಷ್ಯವನ್ನು ರೂಪಿಸುವುದಿಲ್ಲ ಪ್ರೀತಿ ವಿಶ್ವಾಸದಿಂದ ಅವರಿಗೆ ಹೊಣೆಗಾರಿಯ ಜವಾಬ್ದಾರಿಯನ್ನು ವಹಿಸಬೇಕಾಗಿದೆ ಯುವ ಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಜೊತೆಗೆ ವಿವಿಧ ವಿಚಾರಗಳ ಸಂಶೋಧನೆಗಳ ಕಡೆಗೆ ಗಮನ ಹರಿಸಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗಿದೆ ಕೋಲಾರದಲ್ಲಿ ಸರಿ ಸುಮಾರು 75 ವರ್ಷಗಳ ಇತಿಹಾಸವಿರುವ ಬಾಲಕರ ಕಾಲೇಜಿಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದ ಸಿಎಂ.ಡಿಸಿಎಂ ಜೊತೆಗೆ ಚರ್ಚಿಸಿ ಅನುದಾನ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳನ್ನು ಓದುವ ಪ್ರವೃತ್ತಿ ಕಡಿಮೆಯಾಗಿದೆ ಹೊಸ ತಲೆಮಾರಿನ ಜನರು ಜ್ಞಾನದ ಕಡೆಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ ಡಾ.ಶಂಕರಪ್ಪ ನವರು ಸರಕಾರಿ ಸೇವೆಯಿಂದ ಅಷ್ಟೇ ನಿವೃತ್ತಿಯಾಗಿದ್ದಾರೆ ಮುಂದೆ ಅವರು ಬರವಣಿಗೆ ಹೆಚ್ಚಿನ ಸಮಯ ವಹಿಸಲಿದ್ದಾರೆ ಯಾರೇ ಸರಕಾರಿ ನೌಕರರಾಗಿ ನಿವೃತ್ತಿ ಹೊಂದಿದ ದಿನವೇ ಕನಿಷ್ಠ ಅವರಿಗೆ ಸರಕಾರದಿಂದ ಸಿಗುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕೊಡುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮತ್ತು ಸರಕಾರ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಂಕರಪ್ಪ, ನನ್ನ ಬರವಣಿಗೆ ಮತ್ತು ಪ್ರಾಧ್ಯಾಪಕ ವೃತ್ತಿಯಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಸಮಾಜಕ್ಕೆ ಏನಾದರೂ ಕೊಡುಗೆಯಾಗಿ ನೀಡಬೇಕು ಎಂದು ಬೋಧನೆಯ ಜೊತೆಗೆ ಬರವಣಿಗೆ ಆಯ್ಕೆ ಮಾಡಿಕೊಂಡಿದ್ದೇನೆ ಸಮಾಜದಲ್ಲಿ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ, ನೈತಿಕ, ಜ್ಞಾನ, ಹಾಗೂ ಕಲಿಕೆ ಆಧಾರಿತ ಶಿಕ್ಷಣವನ್ನು ಕಲಿಸಬೇಕು ಮನುಷ್ಯನ ವಿಕಸನಕ್ಕೆ ನಾಲ್ಕು ಮುಖ್ಯ ಅಂಶಗಳಾಗಿವೆ ಎಂದರು,

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ತ್ಯಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೆಂಕಟಾಚಲಪತಿ, ಸಮಾಜಸೇವಕ ಶಬರೀಷ್ ಯಾದವ್, ನಿವೃತ್ತ ಪ್ರಾಂಶುಪಾಲ ಎ.ವಿ ರೆಡ್ಡಿ, ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ, ಶಂಕರಪ್ಪ ನವರ ಧರ್ಮಪತ್ನಿ ಉಷಾರಾಣಿ ಮುಂತಾದವರು ಇದ್ದರು

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

4 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

5 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

6 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

10 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

16 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago