Categories: ಕೋಲಾರ

ಶೋಷಿತರ ಧ್ವನಿಗಾಗಿ ಚಿತ್ರದುರ್ಗದಲ್ಲಿ ಜ.28 ರಾಜ್ಯ ಮಟ್ಟದ ಸಮಾವೇಶ: ಎನ್.ಅನಂತ್ ನಾಯ್ಕ

ಕೋಲಾರ: ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ, ಸಂರಕ್ಷಣೆಗಾಗಿ ಹಾಗೂ ಶೋಷಿತ ಸಮುದಾಯಗಳ ಧ್ವನಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಜ.28ರಂದು ಶೋಷಿತರ ಜಾಗೃತಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಮುಖಂಡ ಎನ್. ಅನಂತ ನಾಯಕ್ ಮನವಿ ಮಾಡಿದರು.

ನಗರದ ದೇವರಾಜ ಅರಸು ಭವನದಲ್ಲಿ ಭಾನುವಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಸಮಾವೇಶ ಕುರಿತಾಗಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಬ್ರಾಹ್ಮಣಶಾಹಿಗಳ ಕುತಂತ್ರದಿಂದ ತಳ ಸಮುದಾಯಗಳು ಅನಾದಿ ಕಾಲದಿಂದಲೂ ಸಂಕಷ್ಟ ಎದುರುಸುತ್ತಿದ್ದು, ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಮೂಲ ನಿವಾಸಿಗಳು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದ್ದು, ಪ್ರಸ್ತುತ ಇದನ್ನು ಸಹಿಸದ ಪುರೋಹಿತಶಾಹಿ ವರ್ಗ ಮುಸ್ಲಿಂ ಸಮುದಾಯದ ಜನರನ್ನು ತೋರಿಸಿ ಯುವಕರಲ್ಲಿ ಭಯ ಹುಟ್ಟಿಸಿ ತಮ್ಮಗಳ ಸ್ವಾರ್ಥಕ್ಕಾಗಿ ಯುವಕರನ್ನು ಮರಳು ಮಾಡಿ ಅಧಿಕಾರ ಪಡೆಯುವ ಹುನ್ನಾರ ನಡುಸುತ್ತಿವೆ ಎಂದು ವಿವರಿಸಿದರು.

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕಾಂತರಾಜು ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಬೇಕು, ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು ಇಡ್ಲೂಎಸ್ ಶೇ.10 ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸಬೇಕು. ರಾಜಕಾರಣವೇ ನಮ್ಮ ಭವಿಷ್ಯವನ್ನು ನಿರ್ಧರಿಸುವಾಗ ನಾವು ರಾಜಕಾರಣವನ್ನು ಸರಿ ದಾರಿಗೆ ತರಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಮಾತನಾಡಿ, ಸಂವಿಧಾನ ಅಪಾಯದಲ್ಲಿದೆ. ಉಳ್ಳವರು ಶೋಷಿತರ ಮೇಲೆ ನಿರಂತರ ದಬ್ಬಾಳಿಕೆ ನಡೆಸಿ ಅವರ ಧ್ವನಿ ಹತ್ತಿಕ್ಕುತ್ತಿದ್ದಾರೆ. ಎಲ್ಲ ಶೋಷಿತ ಸಮುದಾಯಗಳು ಒಗ್ಗೂಡಿ ತಮ್ಮ ಹಕ್ಕು ಪಡೆಯಬೇಕಿದೆ ಎಂದು ತಿಳಿಸಿದರು

ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ, ಸಾಮಾಜಿಕ ಸಮಾನತೆ ಸಾರಿದ ಪುಣ್ಯ ಭೂಮಿ ನಮ್ಮದು. ಹಲವು ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಗೊಳಿಸಿವೆ. ಆದರೆ, ಬಲಾಡ್ಯರು ಶೋಷಿತರ ಹಕ್ಕನ್ನು ಕಬಳಿಸುತ್ತಿರುವುದು ಶೋಚನೀಯ. ದೇಶದ ಪ್ರಧಾನಿ ಶೋಷಿತರ ಪರವಾಗಿ ನಿಲ್ಲದಿರುವುದು ದುರದೃಷ್ಟಕರ. ಸಂವಿಧಾನ ರಕ್ಷಣೆಗೆ ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕಿದೆ. ಹಿಂದುಳಿದ ವರ್ಗಗಳ ಕಾಂತರಾಜ ವರದಿ ಜಾರಿಗೆ ಉಳ್ಳವರು ವಿರೋಧಿಸುತ್ತಿದ್ದಾರೆ. ಕೆಲ ಸಚಿವ, ಶಾಸಕರು ಬೆಂಬಲಿಸಿ ಜಾರಿಗೊಳಿಸದಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಇದು ಸರಿಯಾದ ಕ್ರಮವಲ್ಲ ಎಂದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಮುಖಂಡರಾದ ರಾಜಗೋಪಾಲ್, ರವಿಕುಮಾರ್, ವೆಂಕಟರಾಮಯ್ಯ, ಜಿಲ್ಲಾ ಅಧ್ಯಕ್ಷ ಪ್ರಸಾದ್ ಬಾಬು ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಅಂಜನಿ ಸೋಮಣ್ಣ, ನಗರಸಭೆ ಸದಸ್ಯರಾದ ಅಂಬರೀಶ್, ಮಂಜುನಾಥ್, ಮುಖಂಡರಾದ ವಕ್ಕಲೇರಿ ರಾಜಪ್ಪ, ಗೊಲ್ಲಹಳ್ಳಿ ಶಿವಪ್ರಸಾದ್, ರಾಮಣ್ಣ, ಮಂಜುನಾಥ್, ಸೋಮಶೇಖರ್, ತ್ಯಾಗರಾಜ್, ಫಾಲ್ಗುಣ, ಅಪ್ರೋಜ್ ಪಾಷ, ಶಿವಕುಮಾರ್, ಮುಂತಾದವರು ಇದ್ದರು

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

5 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

5 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

17 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago