Categories: ಕೋಲಾರ

ಶೋಷಿತರ ಧ್ವನಿಗಾಗಿ ಚಿತ್ರದುರ್ಗದಲ್ಲಿ ಜ.28 ರಾಜ್ಯ ಮಟ್ಟದ ಸಮಾವೇಶ: ಎನ್.ಅನಂತ್ ನಾಯ್ಕ

ಕೋಲಾರ: ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ, ಸಂರಕ್ಷಣೆಗಾಗಿ ಹಾಗೂ ಶೋಷಿತ ಸಮುದಾಯಗಳ ಧ್ವನಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಜ.28ರಂದು ಶೋಷಿತರ ಜಾಗೃತಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಮುಖಂಡ ಎನ್. ಅನಂತ ನಾಯಕ್ ಮನವಿ ಮಾಡಿದರು.

ನಗರದ ದೇವರಾಜ ಅರಸು ಭವನದಲ್ಲಿ ಭಾನುವಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಸಮಾವೇಶ ಕುರಿತಾಗಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಬ್ರಾಹ್ಮಣಶಾಹಿಗಳ ಕುತಂತ್ರದಿಂದ ತಳ ಸಮುದಾಯಗಳು ಅನಾದಿ ಕಾಲದಿಂದಲೂ ಸಂಕಷ್ಟ ಎದುರುಸುತ್ತಿದ್ದು, ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಮೂಲ ನಿವಾಸಿಗಳು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದ್ದು, ಪ್ರಸ್ತುತ ಇದನ್ನು ಸಹಿಸದ ಪುರೋಹಿತಶಾಹಿ ವರ್ಗ ಮುಸ್ಲಿಂ ಸಮುದಾಯದ ಜನರನ್ನು ತೋರಿಸಿ ಯುವಕರಲ್ಲಿ ಭಯ ಹುಟ್ಟಿಸಿ ತಮ್ಮಗಳ ಸ್ವಾರ್ಥಕ್ಕಾಗಿ ಯುವಕರನ್ನು ಮರಳು ಮಾಡಿ ಅಧಿಕಾರ ಪಡೆಯುವ ಹುನ್ನಾರ ನಡುಸುತ್ತಿವೆ ಎಂದು ವಿವರಿಸಿದರು.

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕಾಂತರಾಜು ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಬೇಕು, ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು ಇಡ್ಲೂಎಸ್ ಶೇ.10 ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸಬೇಕು. ರಾಜಕಾರಣವೇ ನಮ್ಮ ಭವಿಷ್ಯವನ್ನು ನಿರ್ಧರಿಸುವಾಗ ನಾವು ರಾಜಕಾರಣವನ್ನು ಸರಿ ದಾರಿಗೆ ತರಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಮಾತನಾಡಿ, ಸಂವಿಧಾನ ಅಪಾಯದಲ್ಲಿದೆ. ಉಳ್ಳವರು ಶೋಷಿತರ ಮೇಲೆ ನಿರಂತರ ದಬ್ಬಾಳಿಕೆ ನಡೆಸಿ ಅವರ ಧ್ವನಿ ಹತ್ತಿಕ್ಕುತ್ತಿದ್ದಾರೆ. ಎಲ್ಲ ಶೋಷಿತ ಸಮುದಾಯಗಳು ಒಗ್ಗೂಡಿ ತಮ್ಮ ಹಕ್ಕು ಪಡೆಯಬೇಕಿದೆ ಎಂದು ತಿಳಿಸಿದರು

ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ, ಸಾಮಾಜಿಕ ಸಮಾನತೆ ಸಾರಿದ ಪುಣ್ಯ ಭೂಮಿ ನಮ್ಮದು. ಹಲವು ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಗೊಳಿಸಿವೆ. ಆದರೆ, ಬಲಾಡ್ಯರು ಶೋಷಿತರ ಹಕ್ಕನ್ನು ಕಬಳಿಸುತ್ತಿರುವುದು ಶೋಚನೀಯ. ದೇಶದ ಪ್ರಧಾನಿ ಶೋಷಿತರ ಪರವಾಗಿ ನಿಲ್ಲದಿರುವುದು ದುರದೃಷ್ಟಕರ. ಸಂವಿಧಾನ ರಕ್ಷಣೆಗೆ ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕಿದೆ. ಹಿಂದುಳಿದ ವರ್ಗಗಳ ಕಾಂತರಾಜ ವರದಿ ಜಾರಿಗೆ ಉಳ್ಳವರು ವಿರೋಧಿಸುತ್ತಿದ್ದಾರೆ. ಕೆಲ ಸಚಿವ, ಶಾಸಕರು ಬೆಂಬಲಿಸಿ ಜಾರಿಗೊಳಿಸದಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಇದು ಸರಿಯಾದ ಕ್ರಮವಲ್ಲ ಎಂದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಮುಖಂಡರಾದ ರಾಜಗೋಪಾಲ್, ರವಿಕುಮಾರ್, ವೆಂಕಟರಾಮಯ್ಯ, ಜಿಲ್ಲಾ ಅಧ್ಯಕ್ಷ ಪ್ರಸಾದ್ ಬಾಬು ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಅಂಜನಿ ಸೋಮಣ್ಣ, ನಗರಸಭೆ ಸದಸ್ಯರಾದ ಅಂಬರೀಶ್, ಮಂಜುನಾಥ್, ಮುಖಂಡರಾದ ವಕ್ಕಲೇರಿ ರಾಜಪ್ಪ, ಗೊಲ್ಲಹಳ್ಳಿ ಶಿವಪ್ರಸಾದ್, ರಾಮಣ್ಣ, ಮಂಜುನಾಥ್, ಸೋಮಶೇಖರ್, ತ್ಯಾಗರಾಜ್, ಫಾಲ್ಗುಣ, ಅಪ್ರೋಜ್ ಪಾಷ, ಶಿವಕುಮಾರ್, ಮುಂತಾದವರು ಇದ್ದರು

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

4 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

7 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

9 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

20 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 day ago