Categories: ಕೋಲಾರ

ಶೋಷಿತರ ಧ್ವನಿಗಾಗಿ ಚಿತ್ರದುರ್ಗದಲ್ಲಿ ಜ.28 ರಾಜ್ಯ ಮಟ್ಟದ ಸಮಾವೇಶ: ಎನ್.ಅನಂತ್ ನಾಯ್ಕ

ಕೋಲಾರ: ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ, ಸಂರಕ್ಷಣೆಗಾಗಿ ಹಾಗೂ ಶೋಷಿತ ಸಮುದಾಯಗಳ ಧ್ವನಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಜ.28ರಂದು ಶೋಷಿತರ ಜಾಗೃತಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಮುಖಂಡ ಎನ್. ಅನಂತ ನಾಯಕ್ ಮನವಿ ಮಾಡಿದರು.

ನಗರದ ದೇವರಾಜ ಅರಸು ಭವನದಲ್ಲಿ ಭಾನುವಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಸಮಾವೇಶ ಕುರಿತಾಗಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಬ್ರಾಹ್ಮಣಶಾಹಿಗಳ ಕುತಂತ್ರದಿಂದ ತಳ ಸಮುದಾಯಗಳು ಅನಾದಿ ಕಾಲದಿಂದಲೂ ಸಂಕಷ್ಟ ಎದುರುಸುತ್ತಿದ್ದು, ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಮೂಲ ನಿವಾಸಿಗಳು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದ್ದು, ಪ್ರಸ್ತುತ ಇದನ್ನು ಸಹಿಸದ ಪುರೋಹಿತಶಾಹಿ ವರ್ಗ ಮುಸ್ಲಿಂ ಸಮುದಾಯದ ಜನರನ್ನು ತೋರಿಸಿ ಯುವಕರಲ್ಲಿ ಭಯ ಹುಟ್ಟಿಸಿ ತಮ್ಮಗಳ ಸ್ವಾರ್ಥಕ್ಕಾಗಿ ಯುವಕರನ್ನು ಮರಳು ಮಾಡಿ ಅಧಿಕಾರ ಪಡೆಯುವ ಹುನ್ನಾರ ನಡುಸುತ್ತಿವೆ ಎಂದು ವಿವರಿಸಿದರು.

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕಾಂತರಾಜು ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಬೇಕು, ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು ಇಡ್ಲೂಎಸ್ ಶೇ.10 ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸಬೇಕು. ರಾಜಕಾರಣವೇ ನಮ್ಮ ಭವಿಷ್ಯವನ್ನು ನಿರ್ಧರಿಸುವಾಗ ನಾವು ರಾಜಕಾರಣವನ್ನು ಸರಿ ದಾರಿಗೆ ತರಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಮಾತನಾಡಿ, ಸಂವಿಧಾನ ಅಪಾಯದಲ್ಲಿದೆ. ಉಳ್ಳವರು ಶೋಷಿತರ ಮೇಲೆ ನಿರಂತರ ದಬ್ಬಾಳಿಕೆ ನಡೆಸಿ ಅವರ ಧ್ವನಿ ಹತ್ತಿಕ್ಕುತ್ತಿದ್ದಾರೆ. ಎಲ್ಲ ಶೋಷಿತ ಸಮುದಾಯಗಳು ಒಗ್ಗೂಡಿ ತಮ್ಮ ಹಕ್ಕು ಪಡೆಯಬೇಕಿದೆ ಎಂದು ತಿಳಿಸಿದರು

ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ, ಸಾಮಾಜಿಕ ಸಮಾನತೆ ಸಾರಿದ ಪುಣ್ಯ ಭೂಮಿ ನಮ್ಮದು. ಹಲವು ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಗೊಳಿಸಿವೆ. ಆದರೆ, ಬಲಾಡ್ಯರು ಶೋಷಿತರ ಹಕ್ಕನ್ನು ಕಬಳಿಸುತ್ತಿರುವುದು ಶೋಚನೀಯ. ದೇಶದ ಪ್ರಧಾನಿ ಶೋಷಿತರ ಪರವಾಗಿ ನಿಲ್ಲದಿರುವುದು ದುರದೃಷ್ಟಕರ. ಸಂವಿಧಾನ ರಕ್ಷಣೆಗೆ ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕಿದೆ. ಹಿಂದುಳಿದ ವರ್ಗಗಳ ಕಾಂತರಾಜ ವರದಿ ಜಾರಿಗೆ ಉಳ್ಳವರು ವಿರೋಧಿಸುತ್ತಿದ್ದಾರೆ. ಕೆಲ ಸಚಿವ, ಶಾಸಕರು ಬೆಂಬಲಿಸಿ ಜಾರಿಗೊಳಿಸದಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಇದು ಸರಿಯಾದ ಕ್ರಮವಲ್ಲ ಎಂದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಮುಖಂಡರಾದ ರಾಜಗೋಪಾಲ್, ರವಿಕುಮಾರ್, ವೆಂಕಟರಾಮಯ್ಯ, ಜಿಲ್ಲಾ ಅಧ್ಯಕ್ಷ ಪ್ರಸಾದ್ ಬಾಬು ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಅಂಜನಿ ಸೋಮಣ್ಣ, ನಗರಸಭೆ ಸದಸ್ಯರಾದ ಅಂಬರೀಶ್, ಮಂಜುನಾಥ್, ಮುಖಂಡರಾದ ವಕ್ಕಲೇರಿ ರಾಜಪ್ಪ, ಗೊಲ್ಲಹಳ್ಳಿ ಶಿವಪ್ರಸಾದ್, ರಾಮಣ್ಣ, ಮಂಜುನಾಥ್, ಸೋಮಶೇಖರ್, ತ್ಯಾಗರಾಜ್, ಫಾಲ್ಗುಣ, ಅಪ್ರೋಜ್ ಪಾಷ, ಶಿವಕುಮಾರ್, ಮುಂತಾದವರು ಇದ್ದರು

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago