Categories: ಕೋಲಾರ

ಶೋಷಿತರ ಧ್ವನಿಗಾಗಿ ಚಿತ್ರದುರ್ಗದಲ್ಲಿ ಜ.28 ರಾಜ್ಯ ಮಟ್ಟದ ಸಮಾವೇಶ: ಎನ್.ಅನಂತ್ ನಾಯ್ಕ

ಕೋಲಾರ: ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ, ಸಂರಕ್ಷಣೆಗಾಗಿ ಹಾಗೂ ಶೋಷಿತ ಸಮುದಾಯಗಳ ಧ್ವನಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಜ.28ರಂದು ಶೋಷಿತರ ಜಾಗೃತಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಮುಖಂಡ ಎನ್. ಅನಂತ ನಾಯಕ್ ಮನವಿ ಮಾಡಿದರು.

ನಗರದ ದೇವರಾಜ ಅರಸು ಭವನದಲ್ಲಿ ಭಾನುವಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಸಮಾವೇಶ ಕುರಿತಾಗಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಬ್ರಾಹ್ಮಣಶಾಹಿಗಳ ಕುತಂತ್ರದಿಂದ ತಳ ಸಮುದಾಯಗಳು ಅನಾದಿ ಕಾಲದಿಂದಲೂ ಸಂಕಷ್ಟ ಎದುರುಸುತ್ತಿದ್ದು, ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಮೂಲ ನಿವಾಸಿಗಳು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದ್ದು, ಪ್ರಸ್ತುತ ಇದನ್ನು ಸಹಿಸದ ಪುರೋಹಿತಶಾಹಿ ವರ್ಗ ಮುಸ್ಲಿಂ ಸಮುದಾಯದ ಜನರನ್ನು ತೋರಿಸಿ ಯುವಕರಲ್ಲಿ ಭಯ ಹುಟ್ಟಿಸಿ ತಮ್ಮಗಳ ಸ್ವಾರ್ಥಕ್ಕಾಗಿ ಯುವಕರನ್ನು ಮರಳು ಮಾಡಿ ಅಧಿಕಾರ ಪಡೆಯುವ ಹುನ್ನಾರ ನಡುಸುತ್ತಿವೆ ಎಂದು ವಿವರಿಸಿದರು.

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕಾಂತರಾಜು ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಬೇಕು, ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು ಇಡ್ಲೂಎಸ್ ಶೇ.10 ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸಬೇಕು. ರಾಜಕಾರಣವೇ ನಮ್ಮ ಭವಿಷ್ಯವನ್ನು ನಿರ್ಧರಿಸುವಾಗ ನಾವು ರಾಜಕಾರಣವನ್ನು ಸರಿ ದಾರಿಗೆ ತರಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಮಾತನಾಡಿ, ಸಂವಿಧಾನ ಅಪಾಯದಲ್ಲಿದೆ. ಉಳ್ಳವರು ಶೋಷಿತರ ಮೇಲೆ ನಿರಂತರ ದಬ್ಬಾಳಿಕೆ ನಡೆಸಿ ಅವರ ಧ್ವನಿ ಹತ್ತಿಕ್ಕುತ್ತಿದ್ದಾರೆ. ಎಲ್ಲ ಶೋಷಿತ ಸಮುದಾಯಗಳು ಒಗ್ಗೂಡಿ ತಮ್ಮ ಹಕ್ಕು ಪಡೆಯಬೇಕಿದೆ ಎಂದು ತಿಳಿಸಿದರು

ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ, ಸಾಮಾಜಿಕ ಸಮಾನತೆ ಸಾರಿದ ಪುಣ್ಯ ಭೂಮಿ ನಮ್ಮದು. ಹಲವು ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಗೊಳಿಸಿವೆ. ಆದರೆ, ಬಲಾಡ್ಯರು ಶೋಷಿತರ ಹಕ್ಕನ್ನು ಕಬಳಿಸುತ್ತಿರುವುದು ಶೋಚನೀಯ. ದೇಶದ ಪ್ರಧಾನಿ ಶೋಷಿತರ ಪರವಾಗಿ ನಿಲ್ಲದಿರುವುದು ದುರದೃಷ್ಟಕರ. ಸಂವಿಧಾನ ರಕ್ಷಣೆಗೆ ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕಿದೆ. ಹಿಂದುಳಿದ ವರ್ಗಗಳ ಕಾಂತರಾಜ ವರದಿ ಜಾರಿಗೆ ಉಳ್ಳವರು ವಿರೋಧಿಸುತ್ತಿದ್ದಾರೆ. ಕೆಲ ಸಚಿವ, ಶಾಸಕರು ಬೆಂಬಲಿಸಿ ಜಾರಿಗೊಳಿಸದಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಇದು ಸರಿಯಾದ ಕ್ರಮವಲ್ಲ ಎಂದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಮುಖಂಡರಾದ ರಾಜಗೋಪಾಲ್, ರವಿಕುಮಾರ್, ವೆಂಕಟರಾಮಯ್ಯ, ಜಿಲ್ಲಾ ಅಧ್ಯಕ್ಷ ಪ್ರಸಾದ್ ಬಾಬು ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಅಂಜನಿ ಸೋಮಣ್ಣ, ನಗರಸಭೆ ಸದಸ್ಯರಾದ ಅಂಬರೀಶ್, ಮಂಜುನಾಥ್, ಮುಖಂಡರಾದ ವಕ್ಕಲೇರಿ ರಾಜಪ್ಪ, ಗೊಲ್ಲಹಳ್ಳಿ ಶಿವಪ್ರಸಾದ್, ರಾಮಣ್ಣ, ಮಂಜುನಾಥ್, ಸೋಮಶೇಖರ್, ತ್ಯಾಗರಾಜ್, ಫಾಲ್ಗುಣ, ಅಪ್ರೋಜ್ ಪಾಷ, ಶಿವಕುಮಾರ್, ಮುಂತಾದವರು ಇದ್ದರು

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

54 minutes ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago