ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಮಹಿಳೆಯ ಡೈಮಂಡ್ ರಿಂಗ್, 1 ಲಕ್ಷ ನಗದನ್ನ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -1ರ ನಿರ್ಗಮನ ದ್ವಾರದ ಗೇಟ್ ನಂಬರ್ -1 ಬಳಿಯ ಶೌಚಾಲಯದ ಬಳಿ ನಡೆದಿದೆ.
ಬೆಂಗಳೂರಿನಿಂದ- ಅಹಮದಬಾದ್ ಗೆ ಪ್ರಯಾಣ ಬೆಳಸಿದ ಮಹಿಳೆಯೊಬ್ಬರು ಕೆಐಎಎಲ್ ಬಳಿಯ ಶೌಚಾಲಯಕ್ಕೆ ಹೋಗಿದ್ದರು, ಶೌಚಾಲಯಕ್ಕೆ ಹೋಗುವ ಮುನ್ನ ತಮ್ಮ ಬ್ಯಾಗ್ ನ್ನು ಹೊರಗಿಟ್ಟಿದ್ದರು, ವಾಪಸ್ ಬಂದು ನೋಡಿದಾಗ ಬ್ಯಾಗ್ ನಾಪತ್ತೆಯಾಗಿದೆ, ಬ್ಯಾಗ್ ನಲ್ಲಿದ್ದ ಡೈಮಂಡ್ ರಿಂಗ್, ಒಂದು ಲಕ್ಷ ನಗದು ಕಳವು ಮಾಡಲಾಗಿದೆ.
ಬ್ಯಾಗ್ ನಲ್ಲಿ ಒಂದು ಡೈಮಂಡ್ ರಿಂಗ್ , ಒಂದು ಜೊತೆ ಕಿವಿಯೊಲೆ ಮತ್ತು 1 ಲಕ್ಷ ನಗದು ಹಣ ಇದ್ದು, 3.7 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 1 ಲಕ್ಷ ನಗದು ಕಳವು ಮಾಡಲಾಗಿದೆ ಎಂದು ಶಾಲೂ ಅಗರ್ವಾಲ್ ಸ್ನೇಹಿತರಾದ ಪ್ರಣವ್ ವಿಠಲ್ ಗಂಭೀರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…