ಶೌಚಾಲಯ ಕಟ್ಟಡ ಕೆಲಸ ಮಾಡುವಾಗ ಯುವಕನಿಗೆ ವಿದ್ಯುತ್ ಸ್ವರ್ಶಗೊಂಡಿದ್ದು, ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಯರ್ತಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ..
ದೇವನಹಳ್ಳಿ ತಾಲೂಕಿನ ವಿಜಯಪುರ ಮೂಲದ ಶ್ರೇಯಸ್ (18) ಮೃತ ದುರ್ದೈವಿ.
ಯುವಕ ನಿನ್ನೆ ರಾತ್ರಿ ಶೌಚಾಲಯ ಕಟ್ಟಡ ಕೆಲಸ ಮಾಡಲು ಹೋಗಿದ್ದ. ಈ ವೇಳೆ ಮನೆ ಮುಂದಿದ್ದ ವಿದ್ಯುತ್ ಲೈನ್ ಸ್ಪರ್ಶಿಸಿದೆ.
ಕೆಂಪೇಗೌಡ ಏರ್ಪೋಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.