ಶ್ರದ್ಧಾಭಕ್ತಿಯಿಂದ ನಡೆದ ಶ್ರೀಮುತ್ಯಾಲಮ್ಮದೇವಿ ರಥೋತ್ಸವ

ದೊಡ್ಡಬಳ್ಳಾಪುರ ಶಾಂತಿನಗರದ ಶ್ರೀಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮಂಗಳವಾರ ನಾಡದೇವತೆ ಶ್ರೀಮುತ್ಯಾಲಮ್ಮದೇವಿ ರಥೋತ್ಸವ ಬಹಳ ವಿಜೃಂಬಣೆಯಿಂದ ನಡೆಯಿತು.

ಶ್ರೀಮುತ್ಯಾಲಮ್ಮದೇವಿ ರಥೋತ್ಸವ ಹಿನ್ನೆಲೆ ದೇವಾಲಯವನ್ನು ವಿವಿಧ ಪುಷ್ಪಗಳು, ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು. ದೇವತೆಗೆ ವಿವಿಧ ಹೋಮ, ಹವನ, ಪೂಜೆ ಪುನಸ್ಕಾರಗಳನ್ನು ಅದ್ಧೂರಿಯಾಗಿ, ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ರಥೋತ್ಸವದಲ್ಲಿ ವೀರಗಾಸೆ, ಡೊಳ್ಳು ಕುಣಿತ, ತಮಟೆ ಮುಂತಾದ ಕಲಾತಂಡಗಳು ಭಾಗವಹಿಸಿ ನೋಡುಗರ ಕಣ್ಮನ ಸೆಳೆಯಿತು.

ಇದಷ್ಟೇ ಅಲ್ಲದೆ ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ನಾಗಸಂದ್ರ ಗ್ರಾಮಗಳಿಂದಲ್ಲೂ ಮುತ್ಯಾಲಮ್ಮ ಜಾತ್ರೆಗೆ ಮಂಗಳವಾರ ಸಂಜೆ ಕುರ್ಜುಗಳಲ್ಲಿ ಆಯಾ ಗ್ರಾಮದ ದೇವರುಗಳನ್ನು ಪ್ರತಿಷ್ಠಾಪಿಸಿಕೊಂಡು ಹೂವಿನ ಆರತಿಗಳೊಂದಿಗೆ ಆಗಮಿಸಿದವು.

 

ಕುರುಬರಹಳ್ಳಿ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರಿಂದಲು ಹೂವಿನ ಆರತಿ ಉತ್ಸವ ನಡೆಯಿತು. ಈ ವೇಳೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವತೆಯ ದರ್ಶನ ಪಡೆದು ಪುನೀತರಾದರು.

ಜಾತ್ರೆಗೆ ಆಗಮಿಸಿದ್ದ ಸಹಸ್ರಾರು ಜನ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ವಿತರಿಸಲಾಯಿತು. ಬುಧವಾರ ಹಗಲು ಪರಿಷೆ ನಡೆಯಲಿದೆ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

4 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

20 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

20 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago