ಶ್ರದ್ಧಾಭಕ್ತಿಯಿಂದ ನಡೆದ ಶ್ರೀಮುತ್ಯಾಲಮ್ಮದೇವಿ ರಥೋತ್ಸವ

ದೊಡ್ಡಬಳ್ಳಾಪುರ ಶಾಂತಿನಗರದ ಶ್ರೀಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮಂಗಳವಾರ ನಾಡದೇವತೆ ಶ್ರೀಮುತ್ಯಾಲಮ್ಮದೇವಿ ರಥೋತ್ಸವ ಬಹಳ ವಿಜೃಂಬಣೆಯಿಂದ ನಡೆಯಿತು.

ಶ್ರೀಮುತ್ಯಾಲಮ್ಮದೇವಿ ರಥೋತ್ಸವ ಹಿನ್ನೆಲೆ ದೇವಾಲಯವನ್ನು ವಿವಿಧ ಪುಷ್ಪಗಳು, ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು. ದೇವತೆಗೆ ವಿವಿಧ ಹೋಮ, ಹವನ, ಪೂಜೆ ಪುನಸ್ಕಾರಗಳನ್ನು ಅದ್ಧೂರಿಯಾಗಿ, ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ರಥೋತ್ಸವದಲ್ಲಿ ವೀರಗಾಸೆ, ಡೊಳ್ಳು ಕುಣಿತ, ತಮಟೆ ಮುಂತಾದ ಕಲಾತಂಡಗಳು ಭಾಗವಹಿಸಿ ನೋಡುಗರ ಕಣ್ಮನ ಸೆಳೆಯಿತು.

ಇದಷ್ಟೇ ಅಲ್ಲದೆ ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ನಾಗಸಂದ್ರ ಗ್ರಾಮಗಳಿಂದಲ್ಲೂ ಮುತ್ಯಾಲಮ್ಮ ಜಾತ್ರೆಗೆ ಮಂಗಳವಾರ ಸಂಜೆ ಕುರ್ಜುಗಳಲ್ಲಿ ಆಯಾ ಗ್ರಾಮದ ದೇವರುಗಳನ್ನು ಪ್ರತಿಷ್ಠಾಪಿಸಿಕೊಂಡು ಹೂವಿನ ಆರತಿಗಳೊಂದಿಗೆ ಆಗಮಿಸಿದವು.

 

ಕುರುಬರಹಳ್ಳಿ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರಿಂದಲು ಹೂವಿನ ಆರತಿ ಉತ್ಸವ ನಡೆಯಿತು. ಈ ವೇಳೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವತೆಯ ದರ್ಶನ ಪಡೆದು ಪುನೀತರಾದರು.

ಜಾತ್ರೆಗೆ ಆಗಮಿಸಿದ್ದ ಸಹಸ್ರಾರು ಜನ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ವಿತರಿಸಲಾಯಿತು. ಬುಧವಾರ ಹಗಲು ಪರಿಷೆ ನಡೆಯಲಿದೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

6 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

8 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

9 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

22 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

23 hours ago