ಶ್ರದ್ಧಾಭಕ್ತಿಯಿಂದ ನಡೆದ ಶ್ರೀಮುತ್ಯಾಲಮ್ಮದೇವಿ ರಥೋತ್ಸವ

ದೊಡ್ಡಬಳ್ಳಾಪುರ ಶಾಂತಿನಗರದ ಶ್ರೀಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮಂಗಳವಾರ ನಾಡದೇವತೆ ಶ್ರೀಮುತ್ಯಾಲಮ್ಮದೇವಿ ರಥೋತ್ಸವ ಬಹಳ ವಿಜೃಂಬಣೆಯಿಂದ ನಡೆಯಿತು.

ಶ್ರೀಮುತ್ಯಾಲಮ್ಮದೇವಿ ರಥೋತ್ಸವ ಹಿನ್ನೆಲೆ ದೇವಾಲಯವನ್ನು ವಿವಿಧ ಪುಷ್ಪಗಳು, ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು. ದೇವತೆಗೆ ವಿವಿಧ ಹೋಮ, ಹವನ, ಪೂಜೆ ಪುನಸ್ಕಾರಗಳನ್ನು ಅದ್ಧೂರಿಯಾಗಿ, ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ರಥೋತ್ಸವದಲ್ಲಿ ವೀರಗಾಸೆ, ಡೊಳ್ಳು ಕುಣಿತ, ತಮಟೆ ಮುಂತಾದ ಕಲಾತಂಡಗಳು ಭಾಗವಹಿಸಿ ನೋಡುಗರ ಕಣ್ಮನ ಸೆಳೆಯಿತು.

ಇದಷ್ಟೇ ಅಲ್ಲದೆ ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ನಾಗಸಂದ್ರ ಗ್ರಾಮಗಳಿಂದಲ್ಲೂ ಮುತ್ಯಾಲಮ್ಮ ಜಾತ್ರೆಗೆ ಮಂಗಳವಾರ ಸಂಜೆ ಕುರ್ಜುಗಳಲ್ಲಿ ಆಯಾ ಗ್ರಾಮದ ದೇವರುಗಳನ್ನು ಪ್ರತಿಷ್ಠಾಪಿಸಿಕೊಂಡು ಹೂವಿನ ಆರತಿಗಳೊಂದಿಗೆ ಆಗಮಿಸಿದವು.

 

ಕುರುಬರಹಳ್ಳಿ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರಿಂದಲು ಹೂವಿನ ಆರತಿ ಉತ್ಸವ ನಡೆಯಿತು. ಈ ವೇಳೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವತೆಯ ದರ್ಶನ ಪಡೆದು ಪುನೀತರಾದರು.

ಜಾತ್ರೆಗೆ ಆಗಮಿಸಿದ್ದ ಸಹಸ್ರಾರು ಜನ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ವಿತರಿಸಲಾಯಿತು. ಬುಧವಾರ ಹಗಲು ಪರಿಷೆ ನಡೆಯಲಿದೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

18 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

21 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago