ಕೋಲಾರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಿದರು.
ಕೋಲಾರ ನಗರದ ಕ್ಲಾಕ್ ಟವರ್ ಮತ್ತು ಸಂಗೊಂಡಹಳ್ಳಿಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್, ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿ ಶುಭಾಶಯ ಕೋರಿದರು.
ಹಬ್ಬದ ಅಂಗವಾಗಿ ಶ್ವೇತವಸ್ತ್ರ ಧರಿಸಿದ ಮುಸ್ಲಿಮರು, ರಂಗು ರಂಗಿನ ಟೋಪಿಗಳನ್ನು ತೊಟ್ಟು ಪ್ರಾರ್ಥನೆಗೆ ಆಗಮಿಸಿದರು. ಸಾವಿರಾರು ಜನರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸುವುದು ಹಬ್ಬದ ವಾಡಿಕೆಯಾಗಿದೆ. ಮುಸ್ಲಿಂ ಸಮುದಾಯದ ಮೌಲ್ವಿಗಳು ಮತ್ತು ಧರ್ಮ ಗುರುಗಳು ನೆರೆದಿದ್ದದವರಿಗೆ ಸಂದೇಶವನ್ನು ನೀಡುವ ಮೂಲಕ ಹಬ್ಬವನ್ನು ಆಚರಿಸಿದರು.
ಪ್ರಾರ್ಥನೆ ಬಳಿಕ ಸಾಮೂಹಿಕವಾಗಿ ಪರಸ್ಪರ ಶುಭಾಶಯಗಳ ವಿನಿಮಯ ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆ ನಡೆಯುವ ರಸ್ತೆಯನ್ನು ವಾಹನಗಳ ಸಂಚಾರದಿಂದ ನಿರ್ಬಂಧಿಸಲಾಗಿತ್ತು. ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೈಲಾಂಡಹಳ್ಳಿ ಮುರಳಿ, ವೈ.ಶಿವಕುಮಾರ್, ನಗರಸಭಾ ಸದಸ್ಯರಾದ ಅಫ್ಸರ್, ಶಫಿ, ಮುಖಂಡರಾದ ಸೈಫ್ ಫಾರೂಕ್, ಮುಸ್ತಫಾ ಸಮುದಾಯದ ಮುಖಂಡರು ಇದ್ದರು,
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…