ಕೋಲಾರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಿದರು.
ಕೋಲಾರ ನಗರದ ಕ್ಲಾಕ್ ಟವರ್ ಮತ್ತು ಸಂಗೊಂಡಹಳ್ಳಿಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್, ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿ ಶುಭಾಶಯ ಕೋರಿದರು.
ಹಬ್ಬದ ಅಂಗವಾಗಿ ಶ್ವೇತವಸ್ತ್ರ ಧರಿಸಿದ ಮುಸ್ಲಿಮರು, ರಂಗು ರಂಗಿನ ಟೋಪಿಗಳನ್ನು ತೊಟ್ಟು ಪ್ರಾರ್ಥನೆಗೆ ಆಗಮಿಸಿದರು. ಸಾವಿರಾರು ಜನರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸುವುದು ಹಬ್ಬದ ವಾಡಿಕೆಯಾಗಿದೆ. ಮುಸ್ಲಿಂ ಸಮುದಾಯದ ಮೌಲ್ವಿಗಳು ಮತ್ತು ಧರ್ಮ ಗುರುಗಳು ನೆರೆದಿದ್ದದವರಿಗೆ ಸಂದೇಶವನ್ನು ನೀಡುವ ಮೂಲಕ ಹಬ್ಬವನ್ನು ಆಚರಿಸಿದರು.
ಪ್ರಾರ್ಥನೆ ಬಳಿಕ ಸಾಮೂಹಿಕವಾಗಿ ಪರಸ್ಪರ ಶುಭಾಶಯಗಳ ವಿನಿಮಯ ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆ ನಡೆಯುವ ರಸ್ತೆಯನ್ನು ವಾಹನಗಳ ಸಂಚಾರದಿಂದ ನಿರ್ಬಂಧಿಸಲಾಗಿತ್ತು. ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೈಲಾಂಡಹಳ್ಳಿ ಮುರಳಿ, ವೈ.ಶಿವಕುಮಾರ್, ನಗರಸಭಾ ಸದಸ್ಯರಾದ ಅಫ್ಸರ್, ಶಫಿ, ಮುಖಂಡರಾದ ಸೈಫ್ ಫಾರೂಕ್, ಮುಸ್ತಫಾ ಸಮುದಾಯದ ಮುಖಂಡರು ಇದ್ದರು,
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…