ಕೋಲಾರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಿದರು.
ಕೋಲಾರ ನಗರದ ಕ್ಲಾಕ್ ಟವರ್ ಮತ್ತು ಸಂಗೊಂಡಹಳ್ಳಿಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್, ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿ ಶುಭಾಶಯ ಕೋರಿದರು.
ಹಬ್ಬದ ಅಂಗವಾಗಿ ಶ್ವೇತವಸ್ತ್ರ ಧರಿಸಿದ ಮುಸ್ಲಿಮರು, ರಂಗು ರಂಗಿನ ಟೋಪಿಗಳನ್ನು ತೊಟ್ಟು ಪ್ರಾರ್ಥನೆಗೆ ಆಗಮಿಸಿದರು. ಸಾವಿರಾರು ಜನರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸುವುದು ಹಬ್ಬದ ವಾಡಿಕೆಯಾಗಿದೆ. ಮುಸ್ಲಿಂ ಸಮುದಾಯದ ಮೌಲ್ವಿಗಳು ಮತ್ತು ಧರ್ಮ ಗುರುಗಳು ನೆರೆದಿದ್ದದವರಿಗೆ ಸಂದೇಶವನ್ನು ನೀಡುವ ಮೂಲಕ ಹಬ್ಬವನ್ನು ಆಚರಿಸಿದರು.
ಪ್ರಾರ್ಥನೆ ಬಳಿಕ ಸಾಮೂಹಿಕವಾಗಿ ಪರಸ್ಪರ ಶುಭಾಶಯಗಳ ವಿನಿಮಯ ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆ ನಡೆಯುವ ರಸ್ತೆಯನ್ನು ವಾಹನಗಳ ಸಂಚಾರದಿಂದ ನಿರ್ಬಂಧಿಸಲಾಗಿತ್ತು. ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೈಲಾಂಡಹಳ್ಳಿ ಮುರಳಿ, ವೈ.ಶಿವಕುಮಾರ್, ನಗರಸಭಾ ಸದಸ್ಯರಾದ ಅಫ್ಸರ್, ಶಫಿ, ಮುಖಂಡರಾದ ಸೈಫ್ ಫಾರೂಕ್, ಮುಸ್ತಫಾ ಸಮುದಾಯದ ಮುಖಂಡರು ಇದ್ದರು,
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…