Categories: ಕೋಲಾರ

ಶ್ರದ್ಧಾಭಕ್ತಿಯಿಂದ ಬಕ್ರೀದ್‌ ಹಬ್ಬ ಆಚರಣೆ

ಕೋಲಾರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಿದರು.

ಕೋಲಾರ ನಗರದ ಕ್ಲಾಕ್ ಟವರ್ ಮತ್ತು ಸಂಗೊಂಡಹಳ್ಳಿಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್, ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿ ಶುಭಾಶಯ ಕೋರಿದರು.

ಹಬ್ಬದ ಅಂಗವಾಗಿ ಶ್ವೇತವಸ್ತ್ರ ಧರಿಸಿದ ಮುಸ್ಲಿಮರು, ರಂಗು ರಂಗಿನ ಟೋಪಿಗಳನ್ನು ತೊಟ್ಟು ಪ್ರಾರ್ಥನೆಗೆ ಆಗಮಿಸಿದರು. ಸಾವಿರಾರು ಜನರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸುವುದು ಹಬ್ಬದ ವಾಡಿಕೆಯಾಗಿದೆ. ಮುಸ್ಲಿಂ ಸಮುದಾಯದ ಮೌಲ್ವಿಗಳು ಮತ್ತು ಧರ್ಮ ಗುರುಗಳು ನೆರೆದಿದ್ದದವರಿಗೆ ಸಂದೇಶವನ್ನು ನೀಡುವ ಮೂಲಕ ಹಬ್ಬವನ್ನು ಆಚರಿಸಿದರು.

ಪ್ರಾರ್ಥನೆ ಬಳಿಕ ಸಾಮೂಹಿಕವಾಗಿ ಪರಸ್ಪರ ಶುಭಾಶಯಗಳ ವಿನಿಮಯ ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆ ನಡೆಯುವ ರಸ್ತೆಯನ್ನು ವಾಹನಗಳ ಸಂಚಾರದಿಂದ ನಿರ್ಬಂಧಿಸಲಾಗಿತ್ತು. ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೈಲಾಂಡಹಳ್ಳಿ ಮುರಳಿ, ವೈ.ಶಿವಕುಮಾರ್, ನಗರಸಭಾ ಸದಸ್ಯರಾದ ಅಫ್ಸರ್, ಶಫಿ, ಮುಖಂಡರಾದ ಸೈಫ್ ಫಾರೂಕ್, ಮುಸ್ತಫಾ ಸಮುದಾಯದ ಮುಖಂಡರು ಇದ್ದರು,

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

7 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

13 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

14 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago