ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಶ್ರದ್ಧಾಭಕ್ತಿ, ಸಂಭ್ರಮಗಳಿಂದ ಆಚರಿಸಲಾಯಿತು.
ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು.
ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು. ಮಸೀದಿಗಳ ಸಮೀಪದ ಹಾದಿ ಬೀದಿಗಳಲ್ಲಿ ಹಸಿರುಮಯ ಬ್ಯಾನರ್ ಗಳು, ಬಾವುಟಗಳು, ವಿದ್ಯುತ್ ದೀಪಾಲಂಕಾರಗಳು ರಾರಾಜಿಸುತ್ತಿದ್ದವು.
ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಪ್ರಪಂಚದ ಸೃಷ್ಟಿಗೆ ಕಾರಣೀಭೂತರಾದ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನವಾಗಿ ಈದ್ ಮಿಲಾದ್ ಮಹತ್ವ ಪಡೆದಿದೆ. ಅವರ ಬದುಕು, ನಡೆ-ನುಡಿಗಳು, ಜನರಲ್ಲಿ ತೋರಿದ ಕಾರುಣ್ಯ, ಸಮಾನತೆ, ಸಹೋದರತೆ, ಸಹನೆ, ಏಕತೆ, ದೈವ ಭಕ್ತಿ ಎಲ್ಲವೂ ಅದ್ಭುತ, ಸರ್ವ ಕಾಲದಲ್ಲೂ ಅನುಕರಣೀಯ.
ಈದ್ ಮಿಲಾದ್ ದಿನದಂದು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಏರ್ಪಡಿಸಿ ಪ್ರವಾದಿಯವರ ಬಗ್ಗೆ ಮಾಹಿತಿಯನ್ನು ಮತ್ತು ಆಚರಿಸುವ ಬಗೆಯನ್ನೂ, ಧರ್ಮಪಾಲನೆಯ ಮಹತ್ವ ಮತ್ತು ಅದನ್ನು ಪಾಲಿಸುವ ಬಗೆಯನ್ನೂ ಪ್ರಚುರಪಡಿಸಲಾಗುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…