ಶ್ರದ್ಧಾಭಕ್ತಿ, ಅದ್ಧೂರಿಯಾಗಿ ಈದ್ ಮಿಲಾದ್ ಆಚರಣೆ

ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಶ್ರದ್ಧಾಭಕ್ತಿ, ಸಂಭ್ರಮಗಳಿಂದ ಆಚರಿಸಲಾಯಿತು.

ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು.

ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು. ಮಸೀದಿಗಳ ಸಮೀಪದ ಹಾದಿ ಬೀದಿಗಳಲ್ಲಿ ಹಸಿರುಮಯ ಬ್ಯಾನರ್ ಗಳು, ಬಾವುಟಗಳು, ವಿದ್ಯುತ್ ದೀಪಾಲಂಕಾರಗಳು ರಾರಾಜಿಸುತ್ತಿದ್ದವು.

ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ  ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಪ್ರಪಂಚದ ಸೃಷ್ಟಿಗೆ ಕಾರಣೀಭೂತರಾದ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನವಾಗಿ ಈದ್ ಮಿಲಾದ್ ಮಹತ್ವ ಪಡೆದಿದೆ. ಅವರ ಬದುಕು, ನಡೆ-ನುಡಿಗಳು, ಜನರಲ್ಲಿ ತೋರಿದ ಕಾರುಣ್ಯ, ಸಮಾನತೆ, ಸಹೋದರತೆ, ಸಹನೆ, ಏಕತೆ, ದೈವ ಭಕ್ತಿ ಎಲ್ಲವೂ ಅದ್ಭುತ, ಸರ್ವ ಕಾಲದಲ್ಲೂ ಅನುಕರಣೀಯ.

ಈದ್ ಮಿಲಾದ್‍ ದಿನದಂದು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಏರ್ಪಡಿಸಿ ಪ್ರವಾದಿಯವರ ಬಗ್ಗೆ ಮಾಹಿತಿಯನ್ನು ಮತ್ತು ಆಚರಿಸುವ ಬಗೆಯನ್ನೂ, ಧರ್ಮಪಾಲನೆಯ ಮಹತ್ವ ಮತ್ತು ಅದನ್ನು ಪಾಲಿಸುವ ಬಗೆಯನ್ನೂ ಪ್ರಚುರಪಡಿಸಲಾಗುತ್ತದೆ.

Ramesh Babu

Journalist

Recent Posts

ಭಾರೀ ಸಿಡಿಲಿಗೆ ಎರಡು ಸೀಮೆ ಹಸುಗಳ ಸಾವು

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾವಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು…

2 hours ago

56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…

3 hours ago

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ

ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…

4 hours ago

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

14 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 day ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago