ಶ್ರದ್ಧಾಭಕ್ತಿ, ಅದ್ಧೂರಿಯಾಗಿ ಈದ್ ಮಿಲಾದ್ ಆಚರಣೆ

ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಶ್ರದ್ಧಾಭಕ್ತಿ, ಸಂಭ್ರಮಗಳಿಂದ ಆಚರಿಸಲಾಯಿತು.

ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು.

ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು. ಮಸೀದಿಗಳ ಸಮೀಪದ ಹಾದಿ ಬೀದಿಗಳಲ್ಲಿ ಹಸಿರುಮಯ ಬ್ಯಾನರ್ ಗಳು, ಬಾವುಟಗಳು, ವಿದ್ಯುತ್ ದೀಪಾಲಂಕಾರಗಳು ರಾರಾಜಿಸುತ್ತಿದ್ದವು.

ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ  ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಪ್ರಪಂಚದ ಸೃಷ್ಟಿಗೆ ಕಾರಣೀಭೂತರಾದ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನವಾಗಿ ಈದ್ ಮಿಲಾದ್ ಮಹತ್ವ ಪಡೆದಿದೆ. ಅವರ ಬದುಕು, ನಡೆ-ನುಡಿಗಳು, ಜನರಲ್ಲಿ ತೋರಿದ ಕಾರುಣ್ಯ, ಸಮಾನತೆ, ಸಹೋದರತೆ, ಸಹನೆ, ಏಕತೆ, ದೈವ ಭಕ್ತಿ ಎಲ್ಲವೂ ಅದ್ಭುತ, ಸರ್ವ ಕಾಲದಲ್ಲೂ ಅನುಕರಣೀಯ.

ಈದ್ ಮಿಲಾದ್‍ ದಿನದಂದು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಏರ್ಪಡಿಸಿ ಪ್ರವಾದಿಯವರ ಬಗ್ಗೆ ಮಾಹಿತಿಯನ್ನು ಮತ್ತು ಆಚರಿಸುವ ಬಗೆಯನ್ನೂ, ಧರ್ಮಪಾಲನೆಯ ಮಹತ್ವ ಮತ್ತು ಅದನ್ನು ಪಾಲಿಸುವ ಬಗೆಯನ್ನೂ ಪ್ರಚುರಪಡಿಸಲಾಗುತ್ತದೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

19 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago