ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಶ್ರದ್ಧಾಭಕ್ತಿ, ಸಂಭ್ರಮಗಳಿಂದ ಆಚರಿಸಲಾಯಿತು.
ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು.
ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು. ಮಸೀದಿಗಳ ಸಮೀಪದ ಹಾದಿ ಬೀದಿಗಳಲ್ಲಿ ಹಸಿರುಮಯ ಬ್ಯಾನರ್ ಗಳು, ಬಾವುಟಗಳು, ವಿದ್ಯುತ್ ದೀಪಾಲಂಕಾರಗಳು ರಾರಾಜಿಸುತ್ತಿದ್ದವು.
ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಪ್ರಪಂಚದ ಸೃಷ್ಟಿಗೆ ಕಾರಣೀಭೂತರಾದ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನವಾಗಿ ಈದ್ ಮಿಲಾದ್ ಮಹತ್ವ ಪಡೆದಿದೆ. ಅವರ ಬದುಕು, ನಡೆ-ನುಡಿಗಳು, ಜನರಲ್ಲಿ ತೋರಿದ ಕಾರುಣ್ಯ, ಸಮಾನತೆ, ಸಹೋದರತೆ, ಸಹನೆ, ಏಕತೆ, ದೈವ ಭಕ್ತಿ ಎಲ್ಲವೂ ಅದ್ಭುತ, ಸರ್ವ ಕಾಲದಲ್ಲೂ ಅನುಕರಣೀಯ.
ಈದ್ ಮಿಲಾದ್ ದಿನದಂದು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಏರ್ಪಡಿಸಿ ಪ್ರವಾದಿಯವರ ಬಗ್ಗೆ ಮಾಹಿತಿಯನ್ನು ಮತ್ತು ಆಚರಿಸುವ ಬಗೆಯನ್ನೂ, ಧರ್ಮಪಾಲನೆಯ ಮಹತ್ವ ಮತ್ತು ಅದನ್ನು ಪಾಲಿಸುವ ಬಗೆಯನ್ನೂ ಪ್ರಚುರಪಡಿಸಲಾಗುತ್ತದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…