ಶ್ರದ್ಧಾ ಭಕ್ತಿಯಿಂದ ನಡೆದ ಹನುಮ ಜಯಂತಿ ವೈಭವ: ಮೆರಗು ನೀಡದ 25 ರಿಂದ 30 ಉತ್ಸವ ಮೂರ್ತಿಗಳ ಮೆರವಣಿಗೆ

ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.

ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಸಂಜೆಯಲ್ಲಿ 25 ರಿಂದ 30 ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು.

ದೇವಾಲಯದ ಪ್ರಧಾನ ಅರ್ಚಕರಾದ ವಾಸುದೇವಾಚಾರ್ ಮಾತನಾಡಿ, ಉದ್ಭವ ದಿನ್ನೆ ಆಂಜಿನೇಯ ಸ್ವಾಮಿಗೆ 800 ವರ್ಷದ ಇತಿಹಾಸವಿದೆ. ದೇವಾಲಯಕ್ಕೆ ಬಂದು ಭಕ್ತಾಧಿಗಳು ಅರಕೆ ಹೊತ್ತರೆ ಆಂಜನೇಯ ಸ್ವಾಮಿ ಈಡೇರಿಸುತ್ತಾನೆ. ಸಂತಾನ ಇಲ್ಲದವರು ದೇವರಲ್ಲಿ ಪ್ರಾರ್ಥನೆ ಮಾಡಿದರೆ ಸಂತಾನ ಫಲಗಳು ಪ್ರಾಪ್ತಿಯಾಗುತ್ತೆ. ಮೋಕ್ಷ ಫಲಗಳು ಸಿಗುತ್ತೆ ಎಂದರು.

ಪ್ರತಿ ವರ್ಷ ಹನುಮ ಜಯಂತಿ ಪ್ರಯುಕ್ತ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಆಂಧ್ರ, ತಮಿಳುನಾಡು, ಕೇರಳ, ಹಾಸನ, ಚನ್ನರಾಯಪಟ್ಟಣ, ಕಾಳಹಸ್ತಿ ಇಂದ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಾರೆ. ಹನುಮ ಜಯಂತಿ ಪ್ರಯುಕ್ತ 20 ರಿಂದ 25 ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದೆ ವೇಳೆ ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ಮಾತನಾಡಿ, ಪುರಾತನ ಕಾಲದ ದೇವಾಲಯ ಇದಾಗಿದ್ದು ಪ್ರತಿ ವರ್ಷ ಸುತ್ತ ಮುತ್ತಲಿನ ಗ್ರಾಮಸ್ಥರು ಸೇರಿ ಹನುಮ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಿ ಬರುವ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಾರೆ ಎಂದರು.

ಊರಿನ ಹಿತಕ್ಕಾಗಿ ಹೋಮ ಹವನಗಳನ್ನು ಮಾಡಿದ್ದಾರೆ.ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೇವಾಲಯಕ್ಕೆ ಅನುದಾನ ನೀಡಿ ಜೀರ್ಣೋದ್ಧಾರ ಮಾಡಬೇಕು ಎಂದು ಹೇಳಿದರು..

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

17 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago