ಶ್ರದ್ಧಾ ಭಕ್ತಿಯಿಂದ ನಡೆದ ಹನುಮ ಜಯಂತಿ ವೈಭವ: ಮೆರಗು ನೀಡದ 25 ರಿಂದ 30 ಉತ್ಸವ ಮೂರ್ತಿಗಳ ಮೆರವಣಿಗೆ

ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.

ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಸಂಜೆಯಲ್ಲಿ 25 ರಿಂದ 30 ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು.

ದೇವಾಲಯದ ಪ್ರಧಾನ ಅರ್ಚಕರಾದ ವಾಸುದೇವಾಚಾರ್ ಮಾತನಾಡಿ, ಉದ್ಭವ ದಿನ್ನೆ ಆಂಜಿನೇಯ ಸ್ವಾಮಿಗೆ 800 ವರ್ಷದ ಇತಿಹಾಸವಿದೆ. ದೇವಾಲಯಕ್ಕೆ ಬಂದು ಭಕ್ತಾಧಿಗಳು ಅರಕೆ ಹೊತ್ತರೆ ಆಂಜನೇಯ ಸ್ವಾಮಿ ಈಡೇರಿಸುತ್ತಾನೆ. ಸಂತಾನ ಇಲ್ಲದವರು ದೇವರಲ್ಲಿ ಪ್ರಾರ್ಥನೆ ಮಾಡಿದರೆ ಸಂತಾನ ಫಲಗಳು ಪ್ರಾಪ್ತಿಯಾಗುತ್ತೆ. ಮೋಕ್ಷ ಫಲಗಳು ಸಿಗುತ್ತೆ ಎಂದರು.

ಪ್ರತಿ ವರ್ಷ ಹನುಮ ಜಯಂತಿ ಪ್ರಯುಕ್ತ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಆಂಧ್ರ, ತಮಿಳುನಾಡು, ಕೇರಳ, ಹಾಸನ, ಚನ್ನರಾಯಪಟ್ಟಣ, ಕಾಳಹಸ್ತಿ ಇಂದ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಾರೆ. ಹನುಮ ಜಯಂತಿ ಪ್ರಯುಕ್ತ 20 ರಿಂದ 25 ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದೆ ವೇಳೆ ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ಮಾತನಾಡಿ, ಪುರಾತನ ಕಾಲದ ದೇವಾಲಯ ಇದಾಗಿದ್ದು ಪ್ರತಿ ವರ್ಷ ಸುತ್ತ ಮುತ್ತಲಿನ ಗ್ರಾಮಸ್ಥರು ಸೇರಿ ಹನುಮ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಿ ಬರುವ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಾರೆ ಎಂದರು.

ಊರಿನ ಹಿತಕ್ಕಾಗಿ ಹೋಮ ಹವನಗಳನ್ನು ಮಾಡಿದ್ದಾರೆ.ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೇವಾಲಯಕ್ಕೆ ಅನುದಾನ ನೀಡಿ ಜೀರ್ಣೋದ್ಧಾರ ಮಾಡಬೇಕು ಎಂದು ಹೇಳಿದರು..

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

11 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

11 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

18 hours ago