ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.
ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಸಂಜೆಯಲ್ಲಿ 25 ರಿಂದ 30 ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು.
ದೇವಾಲಯದ ಪ್ರಧಾನ ಅರ್ಚಕರಾದ ವಾಸುದೇವಾಚಾರ್ ಮಾತನಾಡಿ, ಉದ್ಭವ ದಿನ್ನೆ ಆಂಜಿನೇಯ ಸ್ವಾಮಿಗೆ 800 ವರ್ಷದ ಇತಿಹಾಸವಿದೆ. ದೇವಾಲಯಕ್ಕೆ ಬಂದು ಭಕ್ತಾಧಿಗಳು ಅರಕೆ ಹೊತ್ತರೆ ಆಂಜನೇಯ ಸ್ವಾಮಿ ಈಡೇರಿಸುತ್ತಾನೆ. ಸಂತಾನ ಇಲ್ಲದವರು ದೇವರಲ್ಲಿ ಪ್ರಾರ್ಥನೆ ಮಾಡಿದರೆ ಸಂತಾನ ಫಲಗಳು ಪ್ರಾಪ್ತಿಯಾಗುತ್ತೆ. ಮೋಕ್ಷ ಫಲಗಳು ಸಿಗುತ್ತೆ ಎಂದರು.
ಇದೆ ವೇಳೆ ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ಮಾತನಾಡಿ, ಪುರಾತನ ಕಾಲದ ದೇವಾಲಯ ಇದಾಗಿದ್ದು ಪ್ರತಿ ವರ್ಷ ಸುತ್ತ ಮುತ್ತಲಿನ ಗ್ರಾಮಸ್ಥರು ಸೇರಿ ಹನುಮ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಿ ಬರುವ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಾರೆ ಎಂದರು.
ಊರಿನ ಹಿತಕ್ಕಾಗಿ ಹೋಮ ಹವನಗಳನ್ನು ಮಾಡಿದ್ದಾರೆ.ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೇವಾಲಯಕ್ಕೆ ಅನುದಾನ ನೀಡಿ ಜೀರ್ಣೋದ್ಧಾರ ಮಾಡಬೇಕು ಎಂದು ಹೇಳಿದರು..
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…