ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.
ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಸಂಜೆಯಲ್ಲಿ 25 ರಿಂದ 30 ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು.
ದೇವಾಲಯದ ಪ್ರಧಾನ ಅರ್ಚಕರಾದ ವಾಸುದೇವಾಚಾರ್ ಮಾತನಾಡಿ, ಉದ್ಭವ ದಿನ್ನೆ ಆಂಜಿನೇಯ ಸ್ವಾಮಿಗೆ 800 ವರ್ಷದ ಇತಿಹಾಸವಿದೆ. ದೇವಾಲಯಕ್ಕೆ ಬಂದು ಭಕ್ತಾಧಿಗಳು ಅರಕೆ ಹೊತ್ತರೆ ಆಂಜನೇಯ ಸ್ವಾಮಿ ಈಡೇರಿಸುತ್ತಾನೆ. ಸಂತಾನ ಇಲ್ಲದವರು ದೇವರಲ್ಲಿ ಪ್ರಾರ್ಥನೆ ಮಾಡಿದರೆ ಸಂತಾನ ಫಲಗಳು ಪ್ರಾಪ್ತಿಯಾಗುತ್ತೆ. ಮೋಕ್ಷ ಫಲಗಳು ಸಿಗುತ್ತೆ ಎಂದರು.
ಇದೆ ವೇಳೆ ವಕೀಲರು, ಬಿಜೆಪಿ ಮುಖಂಡ ಪ್ರತಾಪ್ ಮಾತನಾಡಿ, ಪುರಾತನ ಕಾಲದ ದೇವಾಲಯ ಇದಾಗಿದ್ದು ಪ್ರತಿ ವರ್ಷ ಸುತ್ತ ಮುತ್ತಲಿನ ಗ್ರಾಮಸ್ಥರು ಸೇರಿ ಹನುಮ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಿ ಬರುವ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಾರೆ ಎಂದರು.
ಊರಿನ ಹಿತಕ್ಕಾಗಿ ಹೋಮ ಹವನಗಳನ್ನು ಮಾಡಿದ್ದಾರೆ.ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೇವಾಲಯಕ್ಕೆ ಅನುದಾನ ನೀಡಿ ಜೀರ್ಣೋದ್ಧಾರ ಮಾಡಬೇಕು ಎಂದು ಹೇಳಿದರು..
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…