ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಚೇದಿತ, ಅವಿವಾಹಿತ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಯೋಜನೆಯಡಿ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ರೂ.25,000/- ಸಾಲ ಮತ್ತು ರೂ.25,000/- ಸಹಾಯಧನ ಸೇರಿ ಕನಿಷ್ಠ ಒಟ್ಟು ರೂ.50000/- ಕಡಿಮೆ ಇಲ್ಲದಂತೆ ಸಾಲ ಮತ್ತು ಸಹಾಯಧನವನ್ನು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಒದಗಿಸಲಾಗುವುದು. ಪ್ರತಿ ಫಲಾನುಭವಿಗೆ ರೂ.50,000/- ಸಾಲ ಮತ್ತು ಸಹಾಯಧನ ಮೊತ್ತ ನಿಗದಿಪಡಿಸಲಾಗಿದ್ದು ಯಾವುದೇ ಕಾರಣಕ್ಕೂ ಸಾಲ ಮತ್ತು ಸಹಾಯಧನದ ಮೊತ್ತವನ್ನು ನಿಗದಿಪಡಿಸಿರುವ ಮೊತ್ತಕ್ಕಿಂತ ಕಡಿಮೆ ಮಾಡಬಾರದು.
ಮಾರ್ಗಸೂಚಿಗಳು
1. ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು ಆಗಿರಬೇಕು.
4. ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ ರೂ.3.50 ಲಕ್ಷದೊಳಗಿರಬೇಕು.
5. ಆರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ ಕೇಂದ್ರ ಸರ್ಕಾರದ ಉದ್ಯೋಗಿಯಾಗಿರಬಾರದು.
5. ಅರ್ಜಿದಾರರು KMDCಯಲ್ಲಿ ಸುಸ್ತಿದಾರಾಗಿರಬಾರದು.
ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
View Comments
Good job in karnataka government
Good job in karnataka state government