ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಚೇದಿತ, ಅವಿವಾಹಿತ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಯೋಜನೆಯಡಿ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ರೂ.25,000/- ಸಾಲ ಮತ್ತು ರೂ.25,000/- ಸಹಾಯಧನ ಸೇರಿ ಕನಿಷ್ಠ ಒಟ್ಟು ರೂ.50000/- ಕಡಿಮೆ ಇಲ್ಲದಂತೆ ಸಾಲ ಮತ್ತು ಸಹಾಯಧನವನ್ನು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಒದಗಿಸಲಾಗುವುದು. ಪ್ರತಿ ಫಲಾನುಭವಿಗೆ ರೂ.50,000/- ಸಾಲ ಮತ್ತು ಸಹಾಯಧನ ಮೊತ್ತ ನಿಗದಿಪಡಿಸಲಾಗಿದ್ದು ಯಾವುದೇ ಕಾರಣಕ್ಕೂ ಸಾಲ ಮತ್ತು ಸಹಾಯಧನದ ಮೊತ್ತವನ್ನು ನಿಗದಿಪಡಿಸಿರುವ ಮೊತ್ತಕ್ಕಿಂತ ಕಡಿಮೆ ಮಾಡಬಾರದು.
ಮಾರ್ಗಸೂಚಿಗಳು
1. ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು ಆಗಿರಬೇಕು.
4. ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ ರೂ.3.50 ಲಕ್ಷದೊಳಗಿರಬೇಕು.
5. ಆರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ ಕೇಂದ್ರ ಸರ್ಕಾರದ ಉದ್ಯೋಗಿಯಾಗಿರಬಾರದು.
5. ಅರ್ಜಿದಾರರು KMDCಯಲ್ಲಿ ಸುಸ್ತಿದಾರಾಗಿರಬಾರದು.
ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
View Comments
Good job in karnataka government
Good job in karnataka state government