ಶ್ರಮ ಶಕ್ತಿ (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಚೇದಿತ, ಅವಿವಾಹಿತ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಯೋಜನೆಯಡಿ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ‌.

ಯೋಜನೆಯಡಿ ರೂ.25,000/- ಸಾಲ ಮತ್ತು ರೂ.25,000/- ಸಹಾಯಧನ ಸೇರಿ ಕನಿಷ್ಠ ಒಟ್ಟು ರೂ.50000/- ಕಡಿಮೆ ಇಲ್ಲದಂತೆ ಸಾಲ ಮತ್ತು ಸಹಾಯಧನವನ್ನು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಒದಗಿಸಲಾಗುವುದು. ಪ್ರತಿ ಫಲಾನುಭವಿಗೆ ರೂ.50,000/- ಸಾಲ ಮತ್ತು ಸಹಾಯಧನ ಮೊತ್ತ ನಿಗದಿಪಡಿಸಲಾಗಿದ್ದು ಯಾವುದೇ ಕಾರಣಕ್ಕೂ ಸಾಲ ಮತ್ತು ಸಹಾಯಧನದ ಮೊತ್ತವನ್ನು ನಿಗದಿಪಡಿಸಿರುವ ಮೊತ್ತಕ್ಕಿಂತ ಕಡಿಮೆ ಮಾಡಬಾರದು.

ಮಾರ್ಗಸೂಚಿಗಳು

1. ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು ಆಗಿರಬೇಕು.
4. ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ ರೂ.3.50 ಲಕ್ಷದೊಳಗಿರಬೇಕು.
5. ಆರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ ಕೇಂದ್ರ ಸರ್ಕಾರದ ಉದ್ಯೋಗಿಯಾಗಿರಬಾರದು.
5. ಅರ್ಜಿದಾರರು KMDCಯಲ್ಲಿ ಸುಸ್ತಿದಾರಾಗಿರಬಾರದು.

ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

2 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

12 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

13 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

22 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago