ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಮಾದರಿ ಕುಟುಂಬವನ್ನಾಗಿಸಿಕೊಳ್ಳಬಹುದು. ಯೋಜನೆಯ ಉತ್ತಮ ಮಾರ್ಗದರ್ಶನದೊಂದಿಗೆ ಪ್ರತಿಯೊಬ್ಬ ಸದಸ್ಯ ಆರ್ಥಿಕವಾಗಿ ಸಫಲರಾಗಬಹುದು ಎಂದು ಪ್ರೊ.ರವಿಕಿರಣ್ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ನಗರದ ಖಾಸಗಿ ಕಲ್ಯಾಣ‌ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹಲವು ಹಳ್ಳಿಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಶ್ಲಾಘನೀಯ ಎಂದು ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಸ್ಥಳ ಕ್ಷೇತ್ರದಿಂದ ಬರುವ ಅನುದಾನವನ್ನು ಒಕ್ಕೂಟದ ಮೂಲಕ ಸದಸ್ಯರಿಗೆ ಒದಗಿಸಲು ಒಕ್ಕೂಟದ ಪದಾಧಿಕಾರಿಗಳ ಪಾತ್ರ ಮುಖ್ಯ ಎಂದರು.

ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ, ನಾಯಕತ್ವ ಗುಣ, ಸಹಕಾರ ಮನೋಭಾವನೆ ಬಗ್ಗೆ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಪದಾಧಿಕಾರಿಗಳಿಗೆ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು H.S ನಾಗೇಶ್(ಕನ್ನಡ ಛಾಯಾಗ್ರಾಹಕ ಸಂಘದ ಅಧ್ಯಕ್ಷರು)ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಬರೋಡ ಸಹಾಯಕ  ಪ್ರಭಂಧಕರಾದ ಮಧುಸೂದನ್, ತಾಲೂಕು ಯೋಜನಾಧಿಕಾರಿ ಸುಧಾ ಭಾಸ್ಕರ್, ಮೇಲ್ವಿಚಾರಕರು, ಕೃಷಿ ಮೇಲ್ವಿಚಾರಕರು, ತಾಲೂಕಿನ 9 ವಲಯದ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ,CSC ಸೇವಾದಾರರು, ಕಚೇರಿ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

10 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

21 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

22 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

23 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

24 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago