ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಮಾದರಿ ಕುಟುಂಬವನ್ನಾಗಿಸಿಕೊಳ್ಳಬಹುದು. ಯೋಜನೆಯ ಉತ್ತಮ ಮಾರ್ಗದರ್ಶನದೊಂದಿಗೆ ಪ್ರತಿಯೊಬ್ಬ ಸದಸ್ಯ ಆರ್ಥಿಕವಾಗಿ ಸಫಲರಾಗಬಹುದು ಎಂದು ಪ್ರೊ.ರವಿಕಿರಣ್ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ನಗರದ ಖಾಸಗಿ ಕಲ್ಯಾಣ‌ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹಲವು ಹಳ್ಳಿಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಶ್ಲಾಘನೀಯ ಎಂದು ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಸ್ಥಳ ಕ್ಷೇತ್ರದಿಂದ ಬರುವ ಅನುದಾನವನ್ನು ಒಕ್ಕೂಟದ ಮೂಲಕ ಸದಸ್ಯರಿಗೆ ಒದಗಿಸಲು ಒಕ್ಕೂಟದ ಪದಾಧಿಕಾರಿಗಳ ಪಾತ್ರ ಮುಖ್ಯ ಎಂದರು.

ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ, ನಾಯಕತ್ವ ಗುಣ, ಸಹಕಾರ ಮನೋಭಾವನೆ ಬಗ್ಗೆ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಪದಾಧಿಕಾರಿಗಳಿಗೆ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು H.S ನಾಗೇಶ್(ಕನ್ನಡ ಛಾಯಾಗ್ರಾಹಕ ಸಂಘದ ಅಧ್ಯಕ್ಷರು)ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಬರೋಡ ಸಹಾಯಕ  ಪ್ರಭಂಧಕರಾದ ಮಧುಸೂದನ್, ತಾಲೂಕು ಯೋಜನಾಧಿಕಾರಿ ಸುಧಾ ಭಾಸ್ಕರ್, ಮೇಲ್ವಿಚಾರಕರು, ಕೃಷಿ ಮೇಲ್ವಿಚಾರಕರು, ತಾಲೂಕಿನ 9 ವಲಯದ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ,CSC ಸೇವಾದಾರರು, ಕಚೇರಿ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago