ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ ಗ್ರಾಮಸ್ಥರು ಬಹುತೇಕರು ಅಸ್ಥವ್ಯಸ್ತರಾಗಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

200ಕ್ಕೂ ಹೆಚ್ಚು ಗ್ರಾಮಸ್ಥರು ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿರುವ ಜನರಿಗೆ ಆರೋಗ್ಯ ಸಿಬ್ಬಂದಿಯಿಂದ ಪ್ರಾಥಮಿಕ ಚಿಕಿತ್ಸೆ ನಡೆಸಲಾಗುತ್ತಿದೆ.. ತೀವ್ರ ಅಸ್ತವ್ಯಸ್ಥರಾದವರನ್ನ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ..

ಗ್ರಾಮದಲ್ಲಿ ಪ್ರತಿವರ್ಷ ಶ್ರೀರಾಮ ಜಯಂತೋತ್ಸವದ ಅಂಗವಾಗಿ ಅನ್ನಪ್ರಸಾದ ವಿನಿಯೋಗ ನಡೆಯುತ್ತಿತ್ತು. ಈ ವರ್ಷವೇ ಮೊದಲ ಬಾರಿಗೆ ಫುಡ್ ಪಾಯಿಸನ್ ಆಗಿದೆ. ಘಟನೆಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ…

 ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಭೇಟಿ ನೀಡಿ, ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದ್ದಾರೆ.

ಕೆಲವರಿಗೆ ಹೊಟ್ಟೆನೋವು, ವಾಂತಿ-ಬೇಧಿ, ಸುಸ್ತು ಹೆಚ್ಚಾಗಿದೆ. ಗ್ರಾಮದಲ್ಲಿ ಸುಮಾರು 400 ಜನರಿಗೆ ಆರೋಗ್ಯ ಏರುಪೇರಾಗಿದೆ. ಕೆಲವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡ್ತಿದ್ದೀವಿ. ಇನ್ನೂ ಕೆಲವರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಶಾ ಟೀಂ, ಆರ್ ಆರ್ ಟಿ ಟೀಂ, ಆರೋಗ್ಯ ಸಿಬ್ಬಂದಿ ಮಾನಿಟರ್ ಮಾಡ್ತಿದ್ದಾರೆ. ಮನೆ ಮನೆಗೆ ಭೇಟಿ ಕೊಟ್ಟು ಆರೋಗ್ಯ ಸಿಬ್ಬಂದಿ  ಮಾಹಿತಿ ಪಡೆದು ಚಿಕಿತ್ಸೆ ಕೊಡ್ತಿದ್ದಾರೆ ಎಂದು ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿ ಆಸ್ಪತ್ರೆ ಬಳಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಹೇಳಿಕೆ ನೀಡಿದ್ದಾರೆ..

ಗ್ರಾಮಸ್ಥರು, ದಾರಿಯಲ್ಲಿ ಪ್ರಯಾಣ ಬೆಳೆಸಿರುವ ವ್ಯಕ್ತಿಗಳು, ಅಕ್ಕಪಕ್ಕದ ಗ್ರಾಮಸ್ಥರು ಪ್ರಸಾಧ ಸೇವಿಸಿದ್ದಾರೆ. ಈಗಾಗಲೇ ಅನ್ನ ಪ್ರಸಾದದಲ್ಲಿ ಇದ್ದ ಆಹಾರವನ್ನ ಮತ್ತು ಪದಾರ್ಥಗಳನ್ನ ಟೆಸ್ಟಿಂಗ್ ಕಳಿಸಿದ್ದೇವೆ. ಅಡುಗೆ ತಯಾರಿಕೆಗೆ ಬಳಸಿರುವ ನೀರನ್ನು ಸಹ ಟೆಸ್ಟಿಂಗ್ ಕಳಿಸಿದ್ದೇವೆ. ಒಂದು ದಿನದಲ್ಲಿ ಟೆಸ್ಟಿಂಗ್ ರಿಪೋರ್ಟ್ ಬರಲಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

29 minutes ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

2 hours ago

ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು…

5 hours ago

ವಾರ್ಷಿಕ ಭವಿಷ್ಯ……ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ……..

ನಿಮ್ಮ ವಾರ್ಷಿಕ ಭವಿಷ್ಯ...... ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ........ ಇಂದು ಮಾರ್ಚ್ 29, 2026/2027 ರವರೆಗೆ ಈ ಯುಗಾದಿಯಿಂದ ಪ್ರಾರಂಭವಾಗುವ…

6 hours ago

ದೊಡ್ಡಬೆಳವಂಗಲ ಪೊಲೀಸ್ ಠಾಣೆ ಎಎಸ್ಐ ಕೃಷ್ಣ ಸಿ.ಎನ್‌ಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಹಾಗೂ ದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 2025ನೇ ಸಾಲಿನ…

9 hours ago

ನಿಗದಿಯಂತೆ ಭಾನುವಾರವೇ ಶ್ರೀರಾಮ ಶೋಭಾಯಾತ್ರೆ ಆಚರಣೆ

ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ…

19 hours ago