ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿರುವ ಗ್ರಾಮಸ್ಥರು ಬಹುತೇಕರು ಅಸ್ಥವ್ಯಸ್ತರಾಗಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
200ಕ್ಕೂ ಹೆಚ್ಚು ಗ್ರಾಮಸ್ಥರು ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿರುವ ಜನರಿಗೆ ಆರೋಗ್ಯ ಸಿಬ್ಬಂದಿಯಿಂದ ಪ್ರಾಥಮಿಕ ಚಿಕಿತ್ಸೆ ನಡೆಸಲಾಗುತ್ತಿದೆ.. ತೀವ್ರ ಅಸ್ತವ್ಯಸ್ಥರಾದವರನ್ನ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ..
ಗ್ರಾಮದಲ್ಲಿ ಪ್ರತಿವರ್ಷ ಶ್ರೀರಾಮ ಜಯಂತೋತ್ಸವದ ಅಂಗವಾಗಿ ಅನ್ನಪ್ರಸಾದ ವಿನಿಯೋಗ ನಡೆಯುತ್ತಿತ್ತು. ಈ ವರ್ಷವೇ ಮೊದಲ ಬಾರಿಗೆ ಫುಡ್ ಪಾಯಿಸನ್ ಆಗಿದೆ. ಘಟನೆಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ…
ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಭೇಟಿ ನೀಡಿ, ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದ್ದಾರೆ.
ಕೆಲವರಿಗೆ ಹೊಟ್ಟೆನೋವು, ವಾಂತಿ-ಬೇಧಿ, ಸುಸ್ತು ಹೆಚ್ಚಾಗಿದೆ. ಗ್ರಾಮದಲ್ಲಿ ಸುಮಾರು 400 ಜನರಿಗೆ ಆರೋಗ್ಯ ಏರುಪೇರಾಗಿದೆ. ಕೆಲವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡ್ತಿದ್ದೀವಿ. ಇನ್ನೂ ಕೆಲವರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಶಾ ಟೀಂ, ಆರ್ ಆರ್ ಟಿ ಟೀಂ, ಆರೋಗ್ಯ ಸಿಬ್ಬಂದಿ ಮಾನಿಟರ್ ಮಾಡ್ತಿದ್ದಾರೆ. ಮನೆ ಮನೆಗೆ ಭೇಟಿ ಕೊಟ್ಟು ಆರೋಗ್ಯ ಸಿಬ್ಬಂದಿ ಮಾಹಿತಿ ಪಡೆದು ಚಿಕಿತ್ಸೆ ಕೊಡ್ತಿದ್ದಾರೆ ಎಂದು ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿ ಆಸ್ಪತ್ರೆ ಬಳಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಹೇಳಿಕೆ ನೀಡಿದ್ದಾರೆ..
ಗ್ರಾಮಸ್ಥರು, ದಾರಿಯಲ್ಲಿ ಪ್ರಯಾಣ ಬೆಳೆಸಿರುವ ವ್ಯಕ್ತಿಗಳು, ಅಕ್ಕಪಕ್ಕದ ಗ್ರಾಮಸ್ಥರು ಪ್ರಸಾಧ ಸೇವಿಸಿದ್ದಾರೆ. ಈಗಾಗಲೇ ಅನ್ನ ಪ್ರಸಾದದಲ್ಲಿ ಇದ್ದ ಆಹಾರವನ್ನ ಮತ್ತು ಪದಾರ್ಥಗಳನ್ನ ಟೆಸ್ಟಿಂಗ್ ಕಳಿಸಿದ್ದೇವೆ. ಅಡುಗೆ ತಯಾರಿಕೆಗೆ ಬಳಸಿರುವ ನೀರನ್ನು ಸಹ ಟೆಸ್ಟಿಂಗ್ ಕಳಿಸಿದ್ದೇವೆ. ಒಂದು ದಿನದಲ್ಲಿ ಟೆಸ್ಟಿಂಗ್ ರಿಪೋರ್ಟ್ ಬರಲಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…