ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿರುವ ಗ್ರಾಮಸ್ಥರು ಬಹುತೇಕರು ಅಸ್ಥವ್ಯಸ್ತರಾಗಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
200ಕ್ಕೂ ಹೆಚ್ಚು ಗ್ರಾಮಸ್ಥರು ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿರುವ ಜನರಿಗೆ ಆರೋಗ್ಯ ಸಿಬ್ಬಂದಿಯಿಂದ ಪ್ರಾಥಮಿಕ ಚಿಕಿತ್ಸೆ ನಡೆಸಲಾಗುತ್ತಿದೆ.. ತೀವ್ರ ಅಸ್ತವ್ಯಸ್ಥರಾದವರನ್ನ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ..
ಗ್ರಾಮದಲ್ಲಿ ಪ್ರತಿವರ್ಷ ಶ್ರೀರಾಮ ಜಯಂತೋತ್ಸವದ ಅಂಗವಾಗಿ ಅನ್ನಪ್ರಸಾದ ವಿನಿಯೋಗ ನಡೆಯುತ್ತಿತ್ತು. ಈ ವರ್ಷವೇ ಮೊದಲ ಬಾರಿಗೆ ಫುಡ್ ಪಾಯಿಸನ್ ಆಗಿದೆ. ಘಟನೆಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ…
ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಭೇಟಿ ನೀಡಿ, ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದ್ದಾರೆ.
ಕೆಲವರಿಗೆ ಹೊಟ್ಟೆನೋವು, ವಾಂತಿ-ಬೇಧಿ, ಸುಸ್ತು ಹೆಚ್ಚಾಗಿದೆ. ಗ್ರಾಮದಲ್ಲಿ ಸುಮಾರು 400 ಜನರಿಗೆ ಆರೋಗ್ಯ ಏರುಪೇರಾಗಿದೆ. ಕೆಲವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡ್ತಿದ್ದೀವಿ. ಇನ್ನೂ ಕೆಲವರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಶಾ ಟೀಂ, ಆರ್ ಆರ್ ಟಿ ಟೀಂ, ಆರೋಗ್ಯ ಸಿಬ್ಬಂದಿ ಮಾನಿಟರ್ ಮಾಡ್ತಿದ್ದಾರೆ. ಮನೆ ಮನೆಗೆ ಭೇಟಿ ಕೊಟ್ಟು ಆರೋಗ್ಯ ಸಿಬ್ಬಂದಿ ಮಾಹಿತಿ ಪಡೆದು ಚಿಕಿತ್ಸೆ ಕೊಡ್ತಿದ್ದಾರೆ ಎಂದು ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿ ಆಸ್ಪತ್ರೆ ಬಳಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಹೇಳಿಕೆ ನೀಡಿದ್ದಾರೆ..
ಗ್ರಾಮಸ್ಥರು, ದಾರಿಯಲ್ಲಿ ಪ್ರಯಾಣ ಬೆಳೆಸಿರುವ ವ್ಯಕ್ತಿಗಳು, ಅಕ್ಕಪಕ್ಕದ ಗ್ರಾಮಸ್ಥರು ಪ್ರಸಾಧ ಸೇವಿಸಿದ್ದಾರೆ. ಈಗಾಗಲೇ ಅನ್ನ ಪ್ರಸಾದದಲ್ಲಿ ಇದ್ದ ಆಹಾರವನ್ನ ಮತ್ತು ಪದಾರ್ಥಗಳನ್ನ ಟೆಸ್ಟಿಂಗ್ ಕಳಿಸಿದ್ದೇವೆ. ಅಡುಗೆ ತಯಾರಿಕೆಗೆ ಬಳಸಿರುವ ನೀರನ್ನು ಸಹ ಟೆಸ್ಟಿಂಗ್ ಕಳಿಸಿದ್ದೇವೆ. ಒಂದು ದಿನದಲ್ಲಿ ಟೆಸ್ಟಿಂಗ್ ರಿಪೋರ್ಟ್ ಬರಲಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…