ಶ್ರೀರಾಮನವಮಿ: ಬೆಳ್ಳಿ ರಥದಲ್ಲಿ ಮೆರವಣಿಗೆ ಹೊರಟ ಸೀತಾ ಶ್ರೀರಾಮ ಲಕ್ಷ್ಮಣ ಆಂಜನೇಯಸ್ವಾಮಿ

ಶ್ರೀರಾಮನವಮಿ ಹಬ್ಬದ ಪ್ರಯುಕ್ತ ಸೀತಾ ಶ್ರೀರಾಮ ಲಕ್ಷ್ಮಣ ಆಂಜನೇಯ ಸ್ವಾಮಿ ಸಮೇತ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿಟ್ಟು, ಶ್ರೀ ಸ್ವಾಮಿಯವರ ಮೆರವಣಿಗೆಯನ್ನು ನಗರದ ಪ್ರಮುಖ ರಸ್ತೆ, ಬೀದಿಗಳಲ್ಲಿ‌ ಮೆರವಣಿಗೆ ಮಾಡಲಾಯಿತು.

ಶ್ರೀ ಪ್ರಸನ್ನ ಬಿಸಿಲು ಆಂಜನೇಯ ಸ್ವಾಮಿ ದೇವಾಲಯ ಅರಳು ಮಲ್ಲಿಗೆ ಬಾಗಿಲು, ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ವೃತ್ತ ತೇರಿನ ಬೀದಿ ಇಲ್ಲಿಂದ ಹೊರಟ ಬೆಳ್ಳಿರಥ ರಂಗಪ್ಪ ಸರ್ಕಲ್ ಸೇರಿದಂತೆ ಇತರೆ ಪ್ರಮುಖ ರಸ್ತೆ ಬೀದಿಗಳಲ್ಲಿ ಸಾಗಿತು.

ಬೆಳ್ಳಿರಥದಲ್ಲಿರುವ ಸೀತಾ ಶ್ರೀರಾಮ ಲಕ್ಷ್ಮಣ ಆಂಜನೇಯ ಸ್ವಾಮಿಯವರನ್ನು ಜನ ಕಣ್ತುಂಬಿಕೊಂಡು ದೇವರ ಕೃಪೆಗೆ ಪಾತ್ರರಾದರು.

ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌ ಸಡಗರ‌ ಮನೆ ಮಾಡಿತ್ತು. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

4 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

2 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

3 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

5 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago